ಉಕ್ಕಿ ಹರಿಯುತ್ತಿರುವ ಬೈದುವಳ್ಳಿ ಹಳ್ಳ, ಮೂರು ಊರುಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ

ಅರುಣ್​ ಕುಮಾರ್​ ಬೆಳ್ಳಿ

Updated on: Jun 26, 2025 | 10:26 AM

ಪಶ್ಚಿಮ ಘಟ್ಟ ಪ್ರದೇಶ, ಉತ್ತರ ಕನ್ನಡ ಜಿಲ್ಲೆ, ಮಲೆನಾಡು ಪ್ರದೇಶ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ನಿನ್ನೆಯಿಂದ ಒಂದೇ ಸಮ ಮಳೆ ಸುರಿಯುತ್ತಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಘಾಟ್ ಪ್ರದೇಶಗಳಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರ ಬಂದ್ ಆಗಿದೆ. ಸೇತುವೆಗಳ ಮರುನಿರ್ಮಾಣಕ್ಕೆ ಸರ್ಕಾರ ಮುಂದಾಗುವ ಅವಶ್ಯಕತೆ ಸ್ಪಷ್ಟವಾಗಿ ಕಾಣುತ್ತಿದೆ.

ಚಿಕ್ಕಮಗಳೂರು, ಜೂನ್ 26: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಿನ್ನೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ ಮತ್ತು ತಾಲೂಕಿನಲ್ಲಿರುವ ಹಳ್ಳಕೊಳ್ಳಗಳೆಲ್ಲ ಉಕ್ಕಿ ಹರಿಯುತ್ತಿವೆ. ಪಶ್ಚಿಮ ಘಟ್ಟ ಪ್ರದೇಶದಲ್ಲೂ (Western Ghats region) ಸತತವಾಗಿ ಮಳೆ ಆಗುತ್ತಿದೆ. ದೃಶ್ಯಗಳಲ್ಲಿ ಕಾಣುತ್ತಿರೋದು ಬೈದುವಳ್ಳಿ ಹಳ್ಳ. ಇದು ಯಾವಮಟ್ಟಿಗೆ ಉಕ್ಕಿ ಹರಿಯುತ್ತದೆ ಎಂದರೆ, ಬಾಳೆಗದ್ದೆ, ಗುತ್ತಿ ಮತ್ತು ದೇವರಮನೆ ಊರುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಈ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಆ ಭಾಗದಲ್ಲಿ ಒಂದಷ್ಟು ವಾಹನಗಳು ನಿಂತಿರುವುದನ್ನು ಮತ್ತು ಅವು ಬಂದ ದಾರಿಗೆ ವಾಪಸ್ಸು ಹೋಗುವುದನ್ನು ನೋಡಬಹುದು.

ಇದನ್ನೂ ಓದಿ:  ಮಳೆಯಲ್ಲೂ ಹೊತ್ತಿ ಉರಿದ ಕಾರು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.