ನಟ ದರ್ಶನ್ ಅವರು ಈಗ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗುತ್ತಿದ್ದಾರೆ. ಬೆಂಗಳೂರಿನ ವಾತಾವರಣದಿಂದ ದರ್ಶನ್ ಹಾಯಾಗಿ ಇದ್ದರು. ಈಗ ಅವರು ಅನಿವಾರ್ಯವಾಗಿ ಬಳ್ಳಾರಿಗೆ ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ. ಇಬ್ಬರು ರೌಡಿಗಳ ಸ್ಪರ್ಧೆಯಿಂದ ದರ್ಶನ್ ಸಂಕಷ್ಟ ಅನುಭವಿಸಿದ್ದಾರೆ ಅನ್ನೋ ವಿಚಾರ ಗೊತ್ತೇ? ದರ್ಶನ್ಗೆ ಆತಿಥ್ಯ ಕೊಡುವ ವಿಚಾರದಲ್ಲಿ ಜೈಲಿನಲ್ಲಿರುವ ಬೇಕರಿ ರಘು ಹಾಗೂ ವಿಲ್ಸನ್ ಗಾರ್ಡನ್ ನಾಗ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ನಾಗನ ಉಪಚಾರ ದರ್ಶನ್ಗೆ ಇಷ್ಟ ಆಗಿತ್ತು. ಹೀಗಾಗಿ, ನಾಗನ ಬಳಿ ದರ್ಶನ್ ಹೆಚ್ಚು ಸಮಯ ಕಳೆಯಲು ಆರಂಭಿಸಿದರು. ಇದರಿಂದ ಸಿಟ್ಟಾದ ರಘು ಫೋಟೋ ವೈರಲ್ ಮಾಡಿದ್ದ ಎನ್ನಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:04 am, Wed, 28 August 24