Bakrid: ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ

|

Updated on: Jun 17, 2024 | 10:31 AM

ಬಕ್ರೀದ್​ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್​ ಅಹ್ಮದ್ ಅವರು ಕೂಡ ಪಾಲ್ಗೊಂಡಿದ್ದಾರೆ.

ಬೆಂಗಳೂರು, ಜೂನ್​ 17: ನಾಡಿನಲ್ಲೆಡೆ ಬಕ್ರೀದ್ (Bakrid) ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು (Bengaluru) ಚಾಮರಾಜಪೇಟೆಯಲ್ಲಿರುವ (Chamrajpete) ಈದ್ಗ ಮೈದಾನದಲ್ಲಿ (Idgah Maidan) ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಕ್ಕೂ ಹೆಚ್ಚು ಮುಸ್ಲಿಮರು ಭಾಗಿಯಾಗಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಸಚಿವ ಜಮೀರ್​ ಅಹ್ಮದ್ (Zameer Ahmed)​ ಅವರು ಕೂಡ ಪಾಲ್ಗೊಂಡು ಪಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಪ್ರಾರ್ಥನೆ ಮುಗಿಯುವ ತನಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಚಾಮರಾಜಪೇಟೆ ರಸ್ತೆ ಸಂಪರ್ಕಿಸುವ ಕೆಆರ್ ಮಾರುಕಟ್ಟೆ ರಸ್ತೆ, ಚಾಮರಾಜಪೇಟೆ, ಬಸವನಗುಡಿ ರಸ್ತೆಗಳನ್ನು ಬಂದ್​ ಮಾಡಲಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಮಾಮ್ ಹಾಗೂ ಶಾಲು ಹಾಕಿ ಸನ್ಮಾನಿಸಿದ ಸಚಿವ ಜಮೀರ್ ಅಹಮ್ಮದ್ ಸನ್ಮಾನಿಸಿದರು.

ಇದನ್ನೂ ಓದಿ: ಬೆಂಗಳೂರಿನಾದ್ಯಂತ ಬಕ್ರೀದ್ ಸಂಭ್ರಮ; ಹಲವೆಡೆ ಟ್ರಾಫಿಕ್ ಜಾಮ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on