ಬಾಲಗಂಗಾಧರ ನಾಥ ಸ್ವಾಮೀಜಿ ನನ್ನನ್ನು ಬಿಟ್ಟರೆ ಬೇರೆ ಯಾವ ರಾಜಕಾರಣಿಯನ್ನು ಅಷ್ಟು ಇಷ್ಟಪಡುತ್ತಿರಲಿಲ್ಲ- ಸಿಎಂ ಸಿದ್ದರಾಮಯ್ಯ

Updated on: Sep 11, 2023 | 5:03 PM

Balgangadhar Nath Swamiji: ಶ್ರೀಗಳು ನನ್ನ ಮೇಲೆ ಅಪಾರ ಪ್ರೀತಿ, ಗೌರವ ಇಟ್ಟುಕೊಂಡಿದ್ದಾರೆ. ಬಾಲಗಂಗಾಧರನಾಥಶ್ರೀ, ನಿರ್ಮಲಾನಂದನಾಥಶ್ರೀಗೆ ನಾನು ಚಿರ‌ಋಣಿ. ಬಾಲಗಂಗಾಧರ ನಾಥ ಸ್ವಾಮೀಜಿ ನನ್ನನ್ನು ಇಷ್ಟಪಡುತ್ತಿದ್ದಷ್ಟು ಬೇರೆ ಯಾವ ರಾಜಕಾರಣಿಯನ್ನು ಇಷ್ಟಪಡುತ್ತಿರಲಿಲ್ಲ ಎಂದು ತಮ್ಮ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಹೆಬ್ಬಾಳ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ಆದಿಚುಂಚನಗಿರಿ ಶಾಖಾ ಮಠದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸೋಮವಾರ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ (Siddaramaiah in Mysore) ಅವರು ಮೊದಲ ಬಾರಿಗೆ ಕೆಂಪೇಗೌಡ ಜಯಂತಿ ಮಾಡಿದ್ದು ನಮ್ಮ ಸರ್ಕಾರ. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ಸಹ ನಮ್ಮ ಸರ್ಕಾರ. ಏರ್​ಪೋರ್ಟ್​ಗೆ ನಾಡಪ್ರಭು ಕೆಂಪೇಗೌಡರ ಹೆಸರಿಟ್ಟಿದ್ದು ನಾವೇ ಎಂದು ತಿಳಿಸಿದರು. ಈ ವೇಳೆ, ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದಲ್ಲಿ ಬಾಲ ಗಂಗಾಧರನಾಥ ಶ್ರೀಗಳ ಪ್ರತಿಮೆಗೆ CM Siddaramaiah ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಶ್ರೀಗಳು ನನ್ನ ಮೇಲೆ ಅಪಾರ ಪ್ರೀತಿ, ಗೌರವ ಇಟ್ಟುಕೊಂಡಿದ್ದಾರೆ. ಬಾಲಗಂಗಾಧರನಾಥಶ್ರೀ, ನಿರ್ಮಲಾನಂದನಾಥಶ್ರೀಗೆ ನಾನು ಚಿರ‌ಋಣಿ. ಬಾಲಗಂಗಾಧರ ನಾಥ ಸ್ವಾಮೀಜಿ (Balgangadhar Nath Swamiji) ನನ್ನನ್ನು ಇಷ್ಟಪಡುತ್ತಿದ್ದಷ್ಟು ಬೇರೆ ಯಾವ ರಾಜಕಾರಣಿಯನ್ನು ಇಷ್ಟಪಡುತ್ತಿರಲಿಲ್ಲ ಎಂದು ತಮ್ಮ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More