‘ಸಮಾಜ ಸೇವೆ ಮಾಡಿದ ಅಪ್ಪು ಯಾವ ದೇವರಿಗೂ ಕಮ್ಮಿ ಇಲ್ಲ’; ಸಮಾಧಿ ಬಳಿ ಮದುವೆ ಆಗಲು ಬಂದ ಪ್ರೇಮಿಗಳ ಮಾತು
ಅನೇಕ ಸಮಾಜಮುಖಿ ಕಾರ್ಯಗಳನ್ನು ಪುನೀತ್ ರಾಜ್ಕುಮಾರ್ ಮಾಡುತ್ತಿದ್ದರು. ಹಾಗಾಗಿ ಅವರನ್ನು ದೇವರು ಎಂದೇ ಗೌರವಿಸುತ್ತಾರೆ ಅನೇಕ ಅಭಿಮಾನಿಗಳು. ಈಗ ಅವರ ಸಮಾಧಿ ಎದುರು ಪ್ರೇಮಿಗಳು ಮದುವೆ ಆಗುತ್ತಿದ್ದಾರೆ.
ಬಳ್ಳಾರಿಯಿಂದ ಬಂದಿರುವ ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್ ರಾಜ್ಕುಮಾರ್ ಸಮಾಧಿ ಎದುರು ಮದುವೆ ಆಗಲು ನಿರ್ಧರಿಸಿದ್ದಾರೆ. ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಇಬ್ಬರಿಗೂ ಪುನೀತ್ ರಾಜ್ಕುಮಾರ್ ಎಂದರೆ ಅಪಾರ ಅಭಿಮಾನ. ಅದೇ ಕಾರಣಕ್ಕೆ ಅಪ್ಪು ಸಮಾಧಿ ಎದುರು ಮದುವೆ ಆಗಲು ರಾಜ್ ಕುಟುಂಬದವರಿಂದ ಅನುಮತಿ ಪಡೆದುಕೊಂಡಿದ್ದಾರೆ. ‘ಜಾತಕ ತೋರಿಸಿ, ದೇವಸ್ಥಾನದಲ್ಲಿ ಮದುವೆ ಆಗುವುದು ಸಹಜ. ಹಾಗಂತ ದೇವಸ್ಥಾನದಲ್ಲಿ ಮದುವೆ ಆದವರು ಜೀವನ ಪರ್ಯಂತ ಚೆನ್ನಾಗಿ ಇರುತ್ತಾರೆ ಎಂದು ಹೇಳೋಕಾಗಲ್ಲ. ಪುನೀತ್ ಮಾಡಿದ ಸಮಾಜ ಸೇವೆ ನೋಡಿದರೆ ಅವರಿಗಿಂತ ದೊಡ್ಡ ದೇವರು ಯಾರೂ ಇಲ್ಲ ಎನಿಸುತ್ತದೆ’ ಎಂಬುದು ಗಂಗಾ ಅವರ ಮಾತುಗಳು.
‘ಪುನೀತ್ ಬದುಕಿದಿದ್ದರೆ ಮದುವೆ ಬಳಿಕ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದುಕೊಳ್ಳಬೇಕು ಎಂದುಕೊಂಡಿದ್ವಿ. ಆದರೆ ಅದು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಸಮಾಧಿ ಎದುರು ಮದುವೆ ಆಗುತ್ತೇವೆ. ರಾಘಣ್ಣ ಮತ್ತು ಶಿವಣ್ಣ ಅವರಿಗೆ ಫೋನ್ ಮಾಡಿ ಅನುಮತಿ ಪಡೆದಿದ್ದೇವೆ. ಅವರು ಬರಬೇಕು ಎಂದು ಕೇಳಿಕೊಳ್ಳುತ್ತೇನೆ’ ಎಂದು ಗುರು ಪ್ರಸಾದ್ ಹೇಳಿದ್ದಾರೆ.
ಇದನ್ನೂ ಓದಿ:
ಪುನೀತ್ ಸಾವಿನ ಬಗ್ಗೆ ಮೂಡಿದೆ ಅನುಮಾನ; ವೈದ್ಯರ ವಿರುದ್ಧ ದೂರು ದಾಖಲು
ಪುನೀತ್ ಸಮಾಧಿಗೆ ಪ್ರತಿದಿನ 20 ಸಾವಿರ ಮಂದಿ ಭೇಟಿ; ಕಂಠೀರವ ಸ್ಟುಡಿಯೋದಲ್ಲಿ ಈಗ ಹೇಗಿದೆ ಪರಿಸ್ಥಿತಿ?
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

