ಪರಿಷತ್ ಒಳಗೆ ಕೇಸರಿ ಶಾಲು ಒಯ್ಯಲು ತಡೆ; ಪೊಲೀಸರಿಗೆ ಬಿಜೆಪಿ ಎಂಎಲ್ಸಿಗಳಿಂದ ಹಿಗ್ಗಾಮುಗ್ಗಾ ತರಾಟೆ
ವಿಧಾನ ಪರಿಷತ್ ಒಳಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯರನ್ನು ಪೊಲೀಸರು ತಡೆದಿದ್ದಾರೆ. ಹೌದು, ಇಂದು ವಿಧಾನ ಪರಿಷತ್ಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯ ಕೇಶವಪ್ರಸಾದ್ ಅವರನ್ನು ಪೊಲೀಸರು ತಡೆದಿದ್ದರು. ಈ ವೇಳೆ ಬಿಜೆಪಿ ಎಂಎಲ್ಸಿ(MLC)ಗಳಾದ ಕೇಶವಪ್ರಸಾದ್ ಮತ್ತು ರಘುನಾಥ್ ರಾವ್ ಮಲ್ಕಾಪುರೆ ಅವರು ಪೊಲೀಸರಿಗೆ ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡಿದ್ದಾರೆ.
ಬೆಂಗಳೂರು, ಫೆ.29: ವಿಧಾನ ಪರಿಷತ್ ಒಳಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯರನ್ನು ಪೊಲೀಸರು ತಡೆದಿದ್ದಾರೆ. ಹೌದು, ಇಂದು ವಿಧಾನ ಪರಿಷತ್ಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯ ಕೇಶವಪ್ರಸಾದ್ ಅವರನ್ನು ಪೊಲೀಸರು ತಡೆದಿದ್ದರು. ಈ ವೇಳೆ ಬಿಜೆಪಿ ಎಂಎಲ್ಸಿ(MLC)ಗಳಾದ ಕೇಶವಪ್ರಸಾದ್ ಮತ್ತು ರಘುನಾಥ್ ರಾವ್ ಮಲ್ಕಾಪುರೆ ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಕರೆಸಿ ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡಿದ್ದಾರೆ. ತರಾಟೆಗೆತ್ತಿಕೊಂಡ ಬಳಿಕ ಕೇಸರಿ ಶಾಲನ್ನು ತೆಗೆದುಕೊಂಡು ಹೋಗಲು ಪೊಲೀಸರು ಬಿಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us