Untimely rains cause damage: ಭಾರಿ ಮಳೆ ಮತ್ತು ಬಿರುಗಾಳಿಯಿಂದ ಮೈಸೂರಲ್ಲಿ ಮತ್ತೊಬ್ಬ ರೈತನ ಬಾಳೆ ಬೆಳೆ ಹಾಳು

ಅರುಣ್​ ಕುಮಾರ್​ ಬೆಳ್ಳಿ

Updated on: May 29, 2023 | 11:10 AM

ಕೇವಲ ಮೈಸೂರು ಮಾತ್ರವಲ್ಲ, ರಾಜ್ಯದಲ್ಲಿ ತೊಂದರೆಗೀಡಾಗಿರುವ ಎಲ್ಲ ರೈತರ ಸಹಾಯಕ್ಕೆ ಸರ್ಕಾ ರ ಮುಂದಾಗಬೇಕು.

ಮೈಸೂರು: ನಮ್ಮ ದೇಶದ ಬಹತೇಕ ರೈತರ (farmers) ಬದುಕು ಮಳೆಯನ್ನು ಅವಲಂಬಿಸಿದೆ. ಆದರೆ ಅದೇ ಮಳೆ ಅವರ ಪಾಲಿಗೆ ಶಾಪವಾಗಿ ಪರಿಣಮಿಸುತ್ತಿರೋದು ದುರಂತ. ಮೇನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಮೈಸೂರು ಜಿಲ್ಲೆಯ ನಾನಾ ಭಾಗಗಳಲ್ಲಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ನಂಜನಗೂಡು ತಾಲ್ಲೂಕಿನ ವಡ್ಡರಹುಂಡಿ ಗ್ರಾಮದ ರೈತರಾದ ಪುಟ್ಟಸ್ವಾಮಿ (Puttaswamy) ಮತ್ತು ರಾಣಿಯವರ (Rani) ಬಾಳೆ ಬೆಳೆ ಭಾಗಶಃ ನೆಲಕಚ್ಚಿದೆ. ನಿನ್ನೆ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆ ಬಾಳೆ ತೋಟದಲ್ಲಿ ತಾಂಡವ ನೃತ್ಯ ನಡೆಸಿದೆ. ಮೈಸೂರಿನವರೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಭಾಗದ ರೈತಾಪಿ ಜನರಿಗೆ ನೆರವಾಗಬೇಕು. ಕೇವಲ ಮೈಸೂರು ಮಾತ್ರವಲ್ಲ, ರಾಜ್ಯದಲ್ಲಿ ತೊಂದರೆಗೀಡಾಗಿರುವ ಎಲ್ಲ ರೈತರ ಸಹಾಯಕ್ಕೆ ಮುಂದಾಗಬೇಕು.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

 

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.