ಬಂಡೀಪುರದಲ್ಲಿ ಏಕಾಏಕಿ ಕಾರುಗಳ ಮೇಲೆ ಕಾಡಾನೆ ದಾಳಿ, ಬೆಚ್ಚಿಬಿದ್ದ ಪ್ರಯಾಣಿಕರು: ವಿಡಿಯೋ ವೈರಲ್
Chamarajanagara News: ಬಂಡೀಪುರ-ಕೆಕ್ಕನಹಳ್ಳ ರಸ್ತೆಯಲ್ಲಿ ‘ತರಕಾರಿ ರಾಜ’ ಎಂದೇ ಪ್ರಸಿದ್ಧಿಯಾಗಿರುವ ಕಾಡಾನೆ ಮತ್ತೆ ರಸ್ತೆಗೆ ಇಳಿದು ಕಾರುಗಳ ಮೇಲೆ ದಾಳಿ ನಡೆಸಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ. ಇತ್ತೀಚೆಗಷ್ಟೇ ಕೆಲವು ದಿನಗಳ ಹಿಂದೆ ಈ ಕಾಡಾನೆ ಲಾರಿಯೊಂದರ ಮೇಲೆ ದಾಳಿ ಮಾಡಿತ್ತು.
ಚಾಮರಾಜನಗರ, ಜುಲೈ 20: ಹಲವು ದಿನಗಳಿಂದ ಸೈಲೆಂಟಾಗಿದ್ದ ಬಂಡೀಪುರದ ‘ತರಕಾರಿ ರಾಜ’ ಕಾಡಾನೆ ಮತ್ತೆ ರಸ್ತೆಗೆ ಇಳಿದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೆಕ್ಕನಹಳ್ಳ ರಸ್ತೆಯಲ್ಲಿ ಆಹಾರ ಅರಸಿ ಬಂದ ಆನೆ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರುಗಳ ಬಳಿ ತೆರಳಿ ದಾಳಿ ನಡೆಸಿದೆ. ತರಕಾರಿ ಸಾಗಿಸುವ ವಾಹನಗಳನ್ನು ಗುರಿಯಾಗಿಸಿಕೊಂಡು ನಡುರಸ್ತೆಯಲ್ಲೇ ನಿಲ್ಲುವ ಈ ಕಾಡಾನೆ, ಈ ಬಾರಿ ಕಾರುಗಳ ಬಳಿಗೂ ತೆರಳಿ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದಷ್ಟೇ ಈ ಕಾಡಾನೆ ಲಾರಿಯೊಂದರ ಮೇಲೆ ದಾಳಿ ಮಾಡಿದ್ದು, ಆ ವಿಡಿಯೋ ಸಹ ವೈರಲ್ ಆಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೆಪಿಎಸ್ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
