ಬಂಡೀಪುರ: ಸೆಲ್ಫೀಗೆ ಮುಂದಾದವನ ಅಟ್ಟಾಡಿಸಿ ಮೆಟ್ಟಿದ ಕಾಡಾನೆ, ಆಮೇಲೇನಾಯ್ತು? ವಿಡಿಯೋ ನೋಡಿ
ಬಂಡೀಪುರದಲ್ಲಿ ವಾಹನದಿಂದ ಇಳಿಯಬಾರದು ಎಂಬ ನಿಯಮ ಇದೆ. ಕಾಡಾನೆಗಳು ಹಾಗೂ ವನ್ಯ ಪ್ರಾಣಿಗಳು ಸಂಚರಿಸುವ ಸ್ಥಳ ಆಗಿರುವುದರಿಂದ ಪ್ರಯಾಣಿಕರು, ಪ್ರವಾಸಿಗರು ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೆ, ಪ್ರಯಾಣಿಕನೊಬ್ಬ ಕಾಡಾನೆ ಜತೆ ಸೆಲ್ಫಿ ಕ್ಲಿಕ್ಕಿಸಲು ಹುಚ್ಚಾಟ ಮೆರೆದು ಗಾಯಗೊಂಡ ಘಟನೆ ಸಂಭವಿಸಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ವೈರಲ್ ವಿಡಿಯೋ ಇಲ್ಲಿದೆ.
ಚಾಮರಾಜನಗರ, ಆಗಸ್ಟ್ 11: ಬಂಡೀಪುರ ರಸ್ತೆಯಲ್ಲಿ ಕೇರಳ ಮೂಲದ ಪ್ರವಾಸಿಗನೊಬ್ಬ ಹುಚ್ಚಾಟ ಮೆರೆದಿದ್ದಾನೆ. ಬಂಡೀಪುರ – ಕೆಕ್ಕನಹಳ್ಳ ಚೆಕ್ಪೋಸ್ಟ್ ನಡುವಿನ ಕಾಡಿನ ರಸ್ತೆಯಲ್ಲಿ ಪ್ರಯಾಣಿಕನೊಬ್ಬ ಕಾಡಾನೆ ಜತೆ ಸೆಲ್ಫಿ ಕ್ಲಿಕ್ ಮಾಡಿಕೊಳ್ಳಲು ವಾಹನದಿಂದ ಇಳಿದಿದ್ದಾನೆ. ಈ ವೇಳೆ, ರೊಚ್ಚಿಗೆದ್ದ ಕಾಡಾನೆ ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ. ಓಡುತ್ತಿದ್ದಾಗ ಎಡವಿ ಬಿದ್ದ ಪ್ರಯಾಣಿಕನನ್ನು ಕಾಡಾನೆ ತುಳಿದಿದೆ. ಅದೃಷ್ಟವಶಾತ್, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
