ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?

Updated on: Sep 04, 2024 | 12:43 PM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ 3,991 ಚಾರ್ಜಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ರೇಣುಕಾ ಸ್ವಾಮಿ ಕೊಲೆಯ ಇಂಚಿಂಚೂ ಮಾಹಿತಿ ಇದೆ. ಈ ಬಗ್ಗೆ ಕಮಿಷನರ್​ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಕೇಸ್ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ಪೊಲೀಸರು ಇಂದು (ಸೆಪ್ಟೆಂಬರ್ 4) ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಕಮಿಷನರ್​ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ‘ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಸಂಪೂರ್ಣ ಮುಗಿದಿದೆ. 17 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. 7 ಸಂಪುಟಗಳ, 10 ಕಡತ ಇದೆ. 3991 ಪುಟ ಇದೆ. ಕೊಲೆ ಪ್ರಕರಣದಲ್ಲಿ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. 3 ಸಾಕ್ಷಿದಾರರು ಇದ್ದಾರೆ. ವೈದ್ಯರು, ಆರ್​ಟಿಒ ಅಧಿಕಾರಿಗಳು, 56 ಪೊಲೀಸ್ ಸಿಬ್ಬಂದಿ ಸಾಕ್ಷಿದಾರರಾಗಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More