AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಭಾರತಕ್ಕೆ ಶೇಖ್ ಹಸೀನಾ ಮಗ ಎಚ್ಚರಿಕೆ

ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಭಾರತಕ್ಕೆ ಶೇಖ್ ಹಸೀನಾ ಮಗ ಎಚ್ಚರಿಕೆ

ಸುಷ್ಮಾ ಚಕ್ರೆ
|

Updated on: Aug 05, 2026 | 10:24 PM

Share

ಇದೇ ವೇಳೆ ಭಾರತದ ಭದ್ರತೆಯ ಮೇಲಾಗುವ ಪರಿಣಾಮಗಳ ಕುರಿತು ಎಚ್ಚರಿಸಿದ ವಾಝೇದ್, ಭಾರತದ ಪೂರ್ವ ಗಡಿಯಲ್ಲಿ ಬಾಂಗ್ಲಾದೇಶವು ಮತ್ತೊಂದು ಪಾಕಿಸ್ತಾನವಾಗುತ್ತಿದೆ ಎಂದು ಎಚ್ಚರಿಸಿದರು. "ಇದನ್ನು ಈಗಲೇ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದ ಭಯೋತ್ಪಾದಕರು ಬಾಂಗ್ಲಾದೇಶದಿಂದ ಬರಲಿದ್ದಾರೆ" ಎಂದು ವಾಝೇದ್ ಹೇಳಿದರು.

ನವದೆಹಲಿ, ಆಗಸ್ಟ್ 5: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರ ಪುತ್ರ ಸಾಜೀಬ್ ವಾಝೇದ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದು, ಬಾಂಗ್ಲಾದೇಶದಲ್ಲಿ ಕ್ಷೀಣಿಸುತ್ತಿರುವ ಭದ್ರತಾ ಪರಿಸ್ಥಿತಿಯು ಭಾರತಕ್ಕೆ ಬೆದರಿಕೆಯನ್ನು ಒಡ್ಡಬಹುದು ಎಂದು ಎಚ್ಚರಿಸಿದ್ದಾರೆ. ನವದೆಹಲಿಯಲ್ಲಿ ನಡೆದ ‘ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಫ್ ಸೌತ್ ಏಷ್ಯಾ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಾಜೀದ್ ವಾಝೇದ್, “ಬಾಂಗ್ಲಾದೇಶ ಈಗಾಗಲೇ ವಿಫಲವಾಗಿರುವ ರಾಷ್ಟ್ರವಾಗಿದೆ. ಆ ದೇಶದಲ್ಲಿ ಮಾನವ ಹಕ್ಕುಗಳಿಲ್ಲ, ವಾಕ್ ಸ್ವಾತಂತ್ರ್ಯವಿಲ್ಲ” ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಭಾರತದ ಭದ್ರತೆಯ ಮೇಲಾಗುವ ಪರಿಣಾಮಗಳ ಕುರಿತು ಎಚ್ಚರಿಸಿದ ವಾಝೇದ್, ಭಾರತದ ಪೂರ್ವ ಗಡಿಯಲ್ಲಿ ಬಾಂಗ್ಲಾದೇಶವು ಮತ್ತೊಂದು ಪಾಕಿಸ್ತಾನವಾಗುತ್ತಿದೆ ಎಂದು ಎಚ್ಚರಿಸಿದರು. “ಇದನ್ನು ಈಗಲೇ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದ ಭಯೋತ್ಪಾದಕರು ಬಾಂಗ್ಲಾದೇಶದಿಂದ ಬರಲಿದ್ದಾರೆ” ಎಂದು ವಾಝೇದ್ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us