ಬನ್ನೇರುಘಟ್ಟ ಉದ್ಯಾನವನದಲ್ಲೂ ನೀರಿಗಾಗಿ ಹಾಹಾಕಾರ: ಬತ್ತಿದ ಬೋರ್​​ವೆಲ್​ಗಳು, ಟ್ಯಾಂಕರ್​ ಮೂಲಕ ನೀರು ಪೂರೈಕೆ

Bannerghatta National Park Water crisis: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲೂ ನೀರಿಲ್ಲ. ಇದರಿಂದ ಸಾಕಾನೆಗಳ ಬಿಡಾರದ ಸಫಾರಿ ಸೀಗೆಕಟ್ಟೆ ಕೆರೆ ಒಣಗುತ್ತಿದೆ. ಕೆರೆ ಇದೇ ಮೊದಲ ಬಾರಿಗೆ ನೀರಿಲ್ಲದೆ ಬತ್ತುವ ಹಂತಕ್ಕೆ ತಲುಪಿದೆ. ಹೀಗಾಗಿ ಉದ್ಯಾನವನ ಸಿಬ್ಬಂದಿ ಟ್ಯಾಂಕರ್ ಮೂಲಕ ಕರೆ ತುಂಬಿಸುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ನೀರಿಗೆ ಮತ್ತಷ್ಟು ಪರದಾಡುವಂತಾಗುತ್ತದೆ.

ಬನ್ನೇರುಘಟ್ಟ ಉದ್ಯಾನವನದಲ್ಲೂ ನೀರಿಗಾಗಿ ಹಾಹಾಕಾರ: ಬತ್ತಿದ ಬೋರ್​​ವೆಲ್​ಗಳು, ಟ್ಯಾಂಕರ್​ ಮೂಲಕ ನೀರು ಪೂರೈಕೆ
| Updated By: ವಿವೇಕ ಬಿರಾದಾರ

Updated on:Mar 11, 2024 | 2:34 PM

ಆನೇಕಲ್, ಮಾರ್ಚ್​ 11: ಬೆಂಗಳೂರು (Bengaluru) ಹೊರವಲಯದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಗೂ (Bannerghatta National Park) ನೀರಿನ ಕೊರತೆ ಕಾಡುತ್ತಿದೆ. ಬನ್ನೇರುಘಟ್ಟ (Bannerghatta) ಜೈವಿಕ ಉದ್ಯಾನವನ 731 ಹೆಕ್ಟರ್ ಪ್ರದೇಶದಲ್ಲಿದ್ದು, ಉದ್ಯಾನವನದಲ್ಲಿ 100 ವಿವಿಧ ಜಾತಿಯ 2000ಕ್ಕೂ ಹೆಚ್ಚು ಪ್ರಾಣಿ-ಪಕ್ಷಿ ಸಂಕುಲ ಇವೆ. ಬರಗಾಲದಿಂದ ಉದ್ಯಾನವನದ 8 ಬೋರ್​ವೆಲ್​​ಗಳಲ್ಲಿ 6 ಬೋರ್​ವೆಲ್​ಗಳು ಬತ್ತಿವೆ.

ಇದರಿಂದ ಸಾಕಾನೆಗಳು, ಜಿಂಕೆ, ಹುಲಿ, ಸಿಂಹ, ನೀರಾನೆ ಸೇರಿದಂತೆ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಒದ್ದಾಡುತ್ತಿವೆ. ಮೊಸಳೆ, ಹಿಪ್ಪೋ ಮತ್ತು ಕೊಕ್ಕರೆ ಹೊಂಡಗಳು ಖಾಲಿಯಾಗುತ್ತಿವೆ. ಅಲ್ಲದೆ ಉದ್ಯಾನವನದ ಸಿಬ್ಬಂದಿ ಹಾಗೂ ಪ್ರವಾಸಿಗರ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಝೂ, ಚಿಟ್ಟೆಪಾರ್ಕ್, ಸಫಾರಿ, ರೆಸ್ಕ್ಯೂ ಸೆಂಟರ್ ಸೇರಿದಂತೆ ಇನ್ನೂ ಅನೇಕ ಕಾರ್ಯಕಗಳಿಗೆ ನಿತ್ಯ ಒಂದು ಲಕ್ಷ ಲೀಟರ್ ನೀರು ಬೇಕು. ಸದ್ಯ ಇಷ್ಟು ಪ್ರಮಾಣದಲ್ಲಿ ನೀರು ಲಭ್ಯವಿಲ್ಲ. ಹೀಗಾಗಿ ನಿತ್ಯ ಐದು ಟ್ಯಾಂಕರ್ ಮೂಲಕ ಮತ್ತು ರೆಸ್ಕ್ಯೂ ಸೆಂಟರ್​​ನಲ್ಲಿರುವ 2 ಬೋರ್​​ ವೆಲ್​ಗಳಿಂದ 60 ರಿಂದ 70 ಸಾವಿರ ಲೀಟರ್ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ.

ಉದ್ಯಾನವನದ ಸಾಕಾನೆಗಳ ಬಿಡಾರದ ಸೀಗೆಕಟ್ಟೆ ಕೆರೆಯಲ್ಲೂ ನೀರಿಲ್ಲ. ನೀರಿಲ್ಲದೆ ಸಫಾರಿ ಸೀಗೆಕಟ್ಟೆ ಕೆರೆ ಒಣಗುತ್ತಿದೆ. ಕೆರೆ ಇದೇ ಮೊದಲ ಬಾರಿಗೆ ನೀರಿಲ್ಲದೆ ಬತ್ತುವ ಹಂತಕ್ಕೆ ತಲುಪಿದೆ. ಹೀಗಾಗಿ ಉದ್ಯಾನವನ ಸಿಬ್ಬಂದಿ ಟ್ಯಾಂಕರ್ ಮೂಲಕ ಕರೆ ತುಂಬಿಸುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ನೀರಿಗೆ ಮತ್ತಷ್ಟು ಪರದಾಡುವಂತಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:33 pm, Mon, 11 March 24

Follow us
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!