ಬಾನು ಮುಷ್ತಾಕ್ ತಮ್ಮ 2023ರ ಹೇಳಿಕೆಗೆ ಸ್ಪಷ್ಟನೆ ನೀಡಲಿ ಅಂತ ಹೇಳಿ ಗೊಂದಲ ಮೂಡಿಸಿದ ಯದುವೀರ್

Updated on: Aug 29, 2025 | 5:26 PM

ಮುಸ್ಲಿಂ ಧರ್ಮದ ಆಚಾರ ವಿಚಾರಗಳ ಬಗ್ಗೆ ತಾನು ಮಾತಾಡುವುದಿಲ್ಲ, ಅದರೆ ಬಾನು ಮುಷ್ತಾಕ್ ಅವರು ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ವೇದಿಕೆಯೊಂದರ ಮೇಲೆ ಮಾತಾಡಿದ್ದು ಹಿಂದೂಗಳ ಸೆಂಟಿಮೆಂಟ್ಸ್​ಗೆ ಧಕ್ಕೆಯಾಗಿದೆ, ಅದನ್ನು ಅವರು ಅರ್ಥಮಾಡಿಕೊಳ್ಳಬೇಕು, ಪಕ್ಷದ ನಿಲುವು ಮತ್ತು ತನ್ನ ನಿಲುವು ಒಂದೇ ಆಗಿದೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಯದುವೀರ್ ಹೇಳಿದರು.

ಮೈಸೂರು, ಆಗಸ್ಟ್ 29: ಮೈಸೂರು-ಕೊಡಗು ಬಿಜೆಪಿ ಸಂಸದ ಯದುವೀರ್ ಕೃಷ್ಣ್​ದತ್ ಒಡೆಯರ್ ದ್ವಂದ್ವ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ್ದಾರೆ. ಈಗಾಗಲೇ ವರದಿಯಾಗಿರುವಂತೆ, ಸಾಹಿತಿ ಬಾನು ಮುಷ್ತಾಕ್ (Banu Mushtaq) ಅವರು ದಸರಾ ಉತ್ಸವ ಉದ್ಘಾಟಿಸುವುದನ್ನು ಅವರು ಸ್ವಾಗತಿಸಿದ್ದರು ಮತ್ತು ಷರತ್ತು ವಿಧಿಸಿರಲಿಲ್ಲ. ಅದರೆ ಈಗ ಅವರು, 2023 ರಲ್ಲಿ ಕನ್ನಡ ವೇದಿಕೆಯೊಂದರಲ್ಲಿ ಬಾನು ಮುಷ್ತಾಕ್ ಕನ್ನಡಾಂಬೆಯ ಕುರಿತು ನೀಡಿದ ಹೇಳಿಕೆಯ ಬಗ್ಗೆ ಸ್ಪಷ್ಟೀಕರಣ ನೀಡಲಿ ಇಲ್ಲವೇ ಅಗಿನ ಹೇಳಿಕೆಯನ್ನು ವಾಪಸ್ಸು ಪಡೆಯಲಿ, ಇವರೆಡಲ್ಲಿ ಯಾವುದಾದರೂ ಒಂದನ್ನು ಅವರು ಮಾಡಿದರೆ ಅವರು ದಸರಾ ಮಹೋತ್ಸವ ಉದ್ಘಾಟಿಸಲು ಅಭ್ಯಂತರವಿಲ್ಲ ಎಂದು ಯದುವೀರ್ ಹೇಳಿದರು. ದಸರಾ ಉತ್ಸವವು ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳ ವೇದಿಕೆಯಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:   ಹೋಲಿಕೆ ಮಾಡಿದ ವಿಚಾರದಲ್ಲಿ ಕ್ಷಮೆ ಕೇಳೋದು ಬಿಡೋದು ಯತೀಂದ್ರ ವಿವೇಚನೆಗೆ ಬಿಟ್ಟ ವಿಚಾರ: ಯದುವೀರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More