ಶಿವಸೇನಾ ಸೇರ್ಪಡೆ ಆಹ್ವಾನದ ಬಗ್ಗೆ ಬಸನಗೌಡ ಯತ್ನಾಳ್ ಮಹತ್ವದ ಘೋಷಣೆ

Updated on: Oct 14, 2025 | 12:32 PM

ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಿಂದೂ ಮತಗಳ ವಿಭಜನೆ ಆಗಬಾರದು ಎಂಬ ತಮ್ಮ ನಿಲುವನ್ನು ಅವರು ಪುನರುಚ್ಚರಿಸಿದರು. ಅಕ್ರಮ ಮಸೀದಿಗಳ ತೆರವು ಮತ್ತು ದೇವಾಲಯಗಳ ನಿಧಿಗಳ ದುರುಪಯೋಗದ ಬಗ್ಗೆ ಪ್ರಸ್ತಾಪಿಸಿ, ಕರ್ನಾಟಕದಲ್ಲಿ ಹಿಂದೂ ಸರ್ಕಾರ ರಚನೆಯಾಗುವ ಭವಿಷ್ಯ ನುಡಿದರು.

ಹಾಸನ, ಅಕ್ಟೋಬರ್ 14: ಶಿವಸೇನಾ ಶಿಂಧೆ ಬಣ ಸೇರ್ಪಡೆ ಆಫರ್ ಬಗ್ಗೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಿಂದೂ ಮತಗಳು ವಿಭಜನೆಯಾಗಬಾರದು ಎಂಬುದು ತಮ್ಮ ಮುಖ್ಯ ಗುರಿಯಾಗಿದ್ದು, ಹಿಂದೂಗಳ ಮತ ವಿಭಜಿಸುವಂತಹ ಕೆಟ್ಟ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

 

Published on: Oct 14, 2025 12:30 PM
Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More