ಮಣಿಯದ ಪರಿಸರ ಮಂಡಳಿ, ಮುಂದುವರಿದ ಬಸನಗೌಡ ಪಾಟೀಲ್ ಯತ್ನಾಳ್ ಧರಣಿ!

ಅರುಣ್​ ಕುಮಾರ್​ ಬೆಳ್ಳಿ

Updated on: Aug 28, 2024 | 11:38 AM

ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಕೆಲಸ ಶುರುಮಾಡುವ ಅನುಮತಿಯನ್ನು ಹೈಕೋರ್ಟ್ ನೀಡಿದ್ದರೂ ಪರಿಸರ ಮಂಡಳಿ ಇಲ್ಲಸಲ್ಲದ ಕೊಕ್ಕೆ ಹಾಕಿ ಅನುಮತಿ ಪತ್ರ ನೀಡುತ್ತಿಲ್ಲವೆಂದು ಯತ್ನಾಳ್ ಹೇಳುತ್ತಾರೆ. ಬಿಜೆಪಿ ನಾಯಕರು ಮತ್ತು ಶಾಸಕರು ಇವತ್ತು ಯತ್ನಾಳ್ ಧರಣಿಯಲ್ಲಿ ಜೊತೆಗೂಡಲಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾನ ರಾಜ್ಯದಾದ್ಯಂತ ಹರಾಜಾಗುತ್ತಿದ್ದರೂ ಅಧಿಕಾರಿಗಳಿಗೆ, ಸಚಿವನಿಗೆ ಮತ್ತು ಸರ್ಕಾರಕ್ಕೆ ಅದರ ಪರಿವೆ ಇದ್ದಂತಿಲ್ಲ. 4 ತಿಂಗಳಿಂದ ಮುಚ್ಚಿರುವ ತಮ್ಮ ಸಕ್ಕರೆ ಕಾರ್ಖಾನೆ ಪುನರಾರಂಭಿಸಲು ಅನುಮತಿ ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿನ್ನೆ ಮಧ್ಯಾಹ್ನದಿಂದ ಶುರುಮಾಡಿ ಅಹೋರಾತ್ರಿ ಪರಿಸರ ಭವನದಲ್ಲಿ ದರಣಿ ನಡೆಸಿದರೂ ಅನುಮತಿ ಪತ್ರ ಅವರಿಗೆ ಸಿಕ್ಕಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಸನಗೌಡ ಯತ್ನಾಳ್ ಸಕ್ಕರೆ ಕಾರ್ಖಾನೆ ಪುನರಾರಂಭಿಸಲು ಮಾಲಿನ್ಯ ಮಂಡಳಿ ತೊಡಕು, ಅಶೋಕ ಆಕ್ರೋಶ!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.