ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

Edited By:

Updated on: May 20, 2026 | 6:35 PM

ಪಂಚಮಸಾಲಿ ಪೀಠಗಳ ವಿವಾದ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಹರಿಹರ ಪೀಠದ ಲೆಕ್ಕಪತ್ರದ ಗೊಂದಲಗಳನ್ನು ಪರಿಹರಿಸಲು ನಿರ್ಧರಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಮುಖಂಡರು ಪಾರದರ್ಶಕವಾಗಿ ಸಮಸ್ಯೆಯನ್ನು ಬಗೆಹರಿಸಲು ಒಪ್ಪಿಕೊಂಡಿದ್ದು, ಸಮಾಜಕ್ಕೆ ಒಳಿತು ಮಾಡುವ ಉದ್ದೇಶದಿಂದ ಎರಡೂ ಬಣದವರು ಸಮ್ಮತಿಸಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ.

ಹುಬ್ಬಳ್ಳಿ, ಮೇ 20: ಹರಿಹರ ಪೀಠದ ವಿವಾದ ಬಗೆಹರಿಸುವ ಕೆಲಸ ಮಾಡಿದ್ದೇವೆ. ಟ್ರಸ್ಟ್ ಲೆಕ್ಕಪತ್ರ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಸಮಾಜಕ್ಕೆ ಧಕ್ಕೆ ಬರುವ ಘಟನೆಗಳು ನಡೆದಿವೆ, ಅವುಗಳನ್ನು ಎರಡು ಕಡೆಯವರನ್ನು ಸೇರಿಸಿ ನಿವಾರಣೆ ಮಾಡುವ ಕೆಲಸ ಮಾಡಿದ್ದೇವೆ. ಇಂದು ಶೇಕಡಾ 90ರಷ್ಟು ಸಮಸ್ಯೆ ಬಗೆಹರಿದಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಪಂಚಮಸಾಲಿ ಪೀಠಗಳ ವಿವಾದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಸಮಾಜದ ಗೊಂದಲ ನಿವಾರಣೆಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಎರಡೂ ಕಡೆಯವರ ಮನಸ್ತಾಪ ನಿವಾರಿಸುವ ಕೆಲಸ ನಡೆಯುತ್ತಿದೆ. ಹರಿಹರ ಪೀಠದ ಜೊತೆಗೆ ಕೂಡಲಸಂಗಮ ಪೀಠ ವಿವಾದವನ್ನೂ ಬಗೆಹರಿಸಲಾಗುವುದು. ಯಾವುದೇ ಹೊಸ ಪೀಠ ಸ್ಥಾಪನೆ ಅಥವಾ ಮರುಸ್ಥಾಪನೆಯ ಉದ್ದೇಶವಿಲ್ಲ. ಇರುವ ಮಠಗಳನ್ನು ಸುಧಾರಿಸುವುದೇ ನಮ್ಮ ಉದ್ದೇಶ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More