AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session:  ಸಾಕ್ಷ್ಯ ನೀಡಲು ತನಿಖಾ ಆಯೋಗದ ಮುಂದೆ ಬಸನಗೌಡ ಪಾಟೀಲ್ ಹಾಜರಾಗಿಲ್ಲ: ಪ್ರಿಯಾಂಕ್ ಖರ್ಗೆ, ಸಚಿವ

Karnataka Budget Session:  ಸಾಕ್ಷ್ಯ ನೀಡಲು ತನಿಖಾ ಆಯೋಗದ ಮುಂದೆ ಬಸನಗೌಡ ಪಾಟೀಲ್ ಹಾಜರಾಗಿಲ್ಲ: ಪ್ರಿಯಾಂಕ್ ಖರ್ಗೆ, ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 22, 2024 | 12:32 PM

Share

Karnataka Budget Session: ಪ್ರಶ್ನೆಯೊಂದಕ್ಕೆ ಖರ್ಗೆ ಉತ್ತರ ನೀಡುತ್ತಿದ್ದಾಗ ಯತ್ನಾಳ್ ಎದ್ದು ನಿಂತು ವಿಷಯ ಬಿಟ್ಟು ಬೇರೆ ಏನೇನೋ ಮಾತಾಡ್ತೀರಿ, ಆಡಿದ ಮಾತಿಗೆ ಬದ್ಧರಾಗಿರುವುದಿಲ್ಲ, ಬಿಜೆಪಿ ಸರ್ಕಾರ ವಿರುದ್ಧ 40 ಪರ್ಸೆಂಟ್ ಕಮೀಶನ್ ಆರೋಪ ಮಾಡಿ ತನಿಖೆ ಮಾಡಿಸುವ ಗೋಜಿಗೆ ಹೋಗಲ್ಲ, ಪಿಎಸ್ಐ ನೇಮಕಾತಿ ಹಗರಣನ ತನಿಖೆ ಯಾರು ಮಾಡುತ್ತಿದ್ದಾರೋ ಯಾವ ಹಂತದಲ್ಲಿದೆಯೋ ಯಾರಿಗೂ ಗೊತ್ತಿಲ್ಲ ಎನ್ನುತ್ತಾರೆ.

ಬೆಂಗಳೂರು: ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರು ಕಾಂಗ್ರೆಸ್ ಪಕ್ಷದ ಶಾಸಕರಿಗೂ ನಾಯಕರೇ? ನಮಗಂತೂ ಗೊತ್ತಿಲ್ಲ ಮಾರಾಯ್ರೇ, ಸದನದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೆ ಹೇಳಿ ಸದನದಲ್ಲಿದ್ದವರ ಮುಖದಲ್ಲಿ ಮಂದಹಾಸ ಮೂಡಿಸಿದರು. ಪ್ರಶ್ನೆಯೊಂದಕ್ಕೆ ಖರ್ಗೆ ಉತ್ತರ ನೀಡುತ್ತಿದ್ದಾಗ ಯತ್ನಾಳ್ ಎದ್ದು ನಿಂತು ವಿಷಯ ಬಿಟ್ಟು ಬೇರೆ ಏನೇನೋ ಮಾತಾಡ್ತೀರಿ, ಆಡಿದ ಮಾತಿಗೆ ಬದ್ಧರಾಗಿರುವುದಿಲ್ಲ, ಬಿಜೆಪಿ ಸರ್ಕಾರ ವಿರುದ್ಧ 40 ಪರ್ಸೆಂಟ್ ಕಮೀಶನ್ (40 percent commission) ಆರೋಪ ಮಾಡಿ ತನಿಖೆ ಮಾಡಿಸುವ ಗೋಜಿಗೆ ಹೋಗಲ್ಲ, ಪಿಎಸ್ಐ ನೇಮಕಾತಿ ಹಗರಣನ ತನಿಖೆ ಯಾರು ಮಾಡುತ್ತಿದ್ದಾರೋ ಯಾವ ಹಂತದಲ್ಲಿದೆಯೋ ಯಾರಿಗೂ ಗೊತ್ತಿಲ್ಲ ಅಂತ ಹೇಳಿದಾಗ ಖರ್ಗೆ ತನಿಖೆ ನಡೆಯುತ್ತಿದೆ ಮತ್ತು ಜಸ್ಟೀಸ್ ವೀರಪ್ಪ ಆಯೋಗದ ಮುಂದೆ ಹಾಜರಾಗಿ ನೀವು ಸಾಕ್ಷ್ಯ ನೀಡಬೇಕಿತ್ತು ಅದರೆ ನೀವು ಹೋಗದೆ ತನಿಖೆಯನ್ನು ದೂರುತ್ತಿದ್ದೀರಿ, ವಿಚಾರಣೆಗೆ ತನ್ನನ್ನು ಕರೆದಿಲ್ಲ, ಕರೆದಿದ್ದರೆ ಹೋಗುತ್ತಿದೆ ಅಂತ ಹೇಳಿದಾಗ ಸಭಾಧ್ಯಕ್ಷರ ಪೀಠದಲಿದ್ದ ರುದ್ರಪ್ಪ ಲಮಾಣಿ ಬಜೆಟ್ ಮೇಲೆ ಮಾತಾಡಿ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More