ಬಸನಗೌಡ ಯತ್ನಾಳ್ ರೂ. 2,500 ಕೋಟಿ ಬಗ್ಗೆ ಉಲ್ಲೇಖಿಸಿದ್ದು ಕೇವಲ ಗಾಳಿಮಾತಲ್ಲ: ರವಿಕುಮಾರ್ ಗಾಣಿಗ

Updated on: Nov 18, 2024 | 10:38 AM

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಗಾಣಿಗ ಹಿಂದೆ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದ್ದಾಗ, ಬಿಜೆಪಿಯವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ತಲಾ ₹ 30 ಕೋಟಿ ನೀಡಿ ಖರೀದಿಸಿದರಲ್ಲದೆ, ಅವರ ಚುನಾವಣೆಗಾಗಿಯೂ 30 ಕೋಟಿ ಖರ್ಚು ಮಾಡಿದ್ದರು, ಅವರಲ್ಲಿ ಸಾಕಷ್ಟು ದುಡ್ಡಿದೆ ಎಂದು ಹೇಳಿದರು.

ಮಂಡ್ಯ: ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷದಲ್ಲಿ ಒಬ್ಬರು ಮುಖ್ಯಮಂತ್ರಿಯಾಗಲು ₹ 2,500 ಕೋಟಿ ತಯಾರಾಗಿಟ್ಟುಕೊಂಡು ಕೂತಿದ್ದಾರೆ, ಅವರು ಹೇಳಿದ್ದು ಯಾಕೆ ತನಿಖೆಯಾಗುತ್ತಿಲ್ಲ? ಬಿಜೆಪಿಯಲ್ಲಿ ಹಣದ ಕೊರತೆಯಿಲ್ಲ, ಅವರು ಯಾವತ್ತೂ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದವರಲ್ಲ, ಅಪರೇಶನ್ ಕಮಲ ನಡೆಸಿಯೇ ಅಧಿಕಾರ ಹಿಡಿದವರು, ಹೆಚ್ ಡಿ ದೇವೇಗೌಡ ಮತ್ತು ಯಡಿಯೂರಪ್ಪ ಸರ್ಕಾರ ಬೀಳಿಸ್ತೀವಿ ಅಂತ ಸುಮ್ಮನೆ ಹೇಳುತ್ತಿಲ್ಲ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಾಣಿಗ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಾಸಕರಿಗೆ ₹ 50 ಕೋಟಿ ಆಫರ್ ವಿಷಯ ಸಿದ್ದರಾಮಯ್ಯ ಇದುವರೆಗೆ ಯಾಕೆ ಮುಚ್ಚಿಟ್ಟಿದ್ದರು? ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More