ಗುದ್ದಲಿ ಪೂಜೆಗೆ ಪ್ರಾಮಾಣಿಕರು ಸಿಗಲಿಲ್ವಾ? ಯಡಿಯೂರಪ್ಪೋತ್ಸವ ಬಗ್ಗೆ ಯತ್ನಾಳ್ ವ್ಯಂಗ್ಯ
ಯತ್ನಾಳ್ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಯಡಿಯೂರಪ್ಪನವರ ಕಾರ್ಯಕ್ರಮವನ್ನು ಕೇಂದ್ರ ಬಿಜೆಪಿಗೆ ಬ್ಲಾಕ್ಮೇಲ್ ಎಂದು ಬಣ್ಣಿಸಿದ್ದಾರೆ. ಮಗನ ಭವಿಷ್ಯಕ್ಕಾಗಿ ನಡೆಸುವ ಈ ಉತ್ಸವಕ್ಕೆ ಪ್ರಾಮಾಣಿಕ ಕಾರ್ಯಕರ್ತರು ಭಾಗವಹಿಸಬಾರದು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ನಿರುದ್ಯೋಗವನ್ನು ಪ್ರತಿಬಿಂಬಿಸಲು ಹಿಂದೂ ಸಮಾವೇಶ ಆಯೋಜಿಸುವುದಾಗಿ ತಿಳಿಸಿದ್ದಾರೆ.
ವಿಜಯಪುರ, ಏಪ್ರಿಲ್ 27: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಪ್ಪನ ಸಮಾರಂಭಕ್ಕೆ ಮಗ ಗುದ್ದಲಿ ಪೂಜೆ ಮಾಡಿದ್ದಾನೆ. ಬೇರೆ ಪ್ರಾಮಾಣಿಕರು ಸಿಗಲಿಲ್ಲವಾ ಇವರಿಗೆ ಎಂದು ವಾಗ್ದಾಳಿ ಮಾಡಿದ್ದಾರೆ. ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಸದಿದ್ದರೆ, ಸಿಎಂ ಅಭ್ಯರ್ಥಿ ಮಾಡದಿದ್ದರೆ ಲಿಂಗಾಯತರು ಬಿಜೆಪಿ ಬಿಡ್ತಾರೆಂಬ ಸಂದೇಶ ರವಾನಿಸಲು ಯಡಿಯೂರಪ್ಪೋತ್ಸವ ಮಾಡುತ್ತಿದ್ದಾರೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
