AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್ ತಮ್ಮ ಭಾಷಣದಲ್ಲಿ ವಕ್ಫ್ ಎಂದಾಗ ಸಾರ್ವಜನಿಕರು ರಾಜಕೀಯ ಬೇಡ ಎಂದರು!

ಯತ್ನಾಳ್ ತಮ್ಮ ಭಾಷಣದಲ್ಲಿ ವಕ್ಫ್ ಎಂದಾಗ ಸಾರ್ವಜನಿಕರು ರಾಜಕೀಯ ಬೇಡ ಎಂದರು!

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 11, 2024 | 4:16 PM

Share

ಮೊನ್ನೆಯಷ್ಟೇ ಬಸನಗೌಡ ಯತ್ನಾಳ್ ವಕ್ಫ್ ಭೂವಿವಾದ ಸಂಬಂಧಿಸಿದಂತೆ ವಿಜಯಪುರದಲ್ಲಿ ರೈತರ ಪರವಾಗಿ ಒಂದು ಯಶಸ್ವೀ ಹೋರಾಟ ನಡೆಸಿದರು. ಅದರ ಫಲವಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ರಚಿಸಿರುವ ಜಗದಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿಯು ವಿಜಯಪುರಕ್ಕೆ ಆಗಮಿಸಿ ರೈತರ ಸಮಸ್ಯೆಗಳನ್ನು ಆಲಿಸಿತು.

ಬಾಗಲಕೋಟೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಂದ್ಯಾವತ್ತೂ ಇಂಥ ಸ್ಥಿತಿಯನ್ನು ಎದುರಿಸಿಲ್ಲ ಅನಿಸುತ್ತೆ. ಜಿಲ್ಲೆಯ ತೇರದಾಳದಲ್ಲಿ ಅಲ್ಲಮಪ್ರಭು ದೇವಸ್ಥಾನದ ಲೋಕಾರ್ಪಖೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡುವಾಗ ಅವರು ತಮ್ಮ ಮಾತನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ಯತ್ನಾಳ್ ತಮ್ಮ ಮಾತಿನಲ್ಲಿ ವಕ್ಫ್ ವಿಚಾರವನ್ನು ಪ್ರಸ್ತಾಪಿಸಿದಾಗ ಉದ್ರಿಕ್ತರಾಗುವ ಸಾರ್ವಜನಿಕರು ರಾಜಕೀಯದ ಮಾತು ಬೇಡ ಎಂದು ಕಿರುಚಲಾರಂಭಿಸುತ್ತಾರೆ. ಇದು ರಾಜಕೀಯದ ಮಾತಾ ಎನ್ನುತ್ತಾ ಯತ್ನಾಳ್ ಭಾಷಣವನ್ನು ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿಯುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು ಎಫ್​ಐಆರ್; ಕಾರಣ?