CN Ashwath Narayan: ಅಶ್ವಥ್ ನಾರಾಯಣ ಮಾತಾಡಿದ್ದು ತಪ್ಪು, ರಾಜಕಾರಣಿ ಅಂಥ ಭಾಷೆ ಬಳಸಕೂಡದು: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Feb 16, 2023 | 1:31 PM

ರಾಜಕೀಯದಲ್ಲಿ ಟೀಕೆ, ಖಂಡನೆ ಇದ್ದೇ ಇರುತ್ತದೆ, ಅದರೆ ಹೊಡೆದು ಹಾಕು, ಕೊಲ್ಲು ಮೊದಲಾದ ಪದಬಳಕೆ ಆಗಬಾರದು ಎಂದು ಹೇಳಿದರು. ಹಿಂಸೆಗೆ ಪ್ರಚೋದನೆ ನೀಡುವ ಮಾತುಗಳನ್ನು ಯಾವ ರಾಜಕಾರಣಿಯೂ ಆಡಬಾರದು ಎಂದು ಯತ್ನಾಳ್ ಹೇಳಿದರು.

ಬೆಂಗಳೂರು: ವಿವಾದಾತ್ಮಕ ಹೇಳಿಹೆ ನೀಡುವುದರಲ್ಲಿ ಸಿದ್ಧಹಸ್ತರೆನಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರೇ ತಮ್ಮ ಪಕ್ಷದ ಹಿರಿಯ ಸದಸ್ಯ ಮತ್ತು ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಅವರು ಟಿಪ್ಪು ಸುಲ್ತಾನನನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನವರನ್ನೂ (Siddaramaiah) ಹೊಡೆದು ಹಾಕಬೇಕೆಂದು ನೀಡಿದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವಿಧಾನ ಸೌಧದ ಹೊರಭಾಗದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಯತ್ನಾಳ್, ರಾಜಕೀಯದಲ್ಲಿ ಟೀಕೆ, ಖಂಡನೆ ಇದ್ದೇ ಇರುತ್ತದೆ, ಅದರೆ ಹೊಡೆದು ಹಾಕು, ಕೊಲ್ಲು ಮೊದಲಾದ ಪದಬಳಕೆ ಆಗಬಾರದು ಎಂದು ಹೇಳಿದರು. ಹಿಂಸೆಗೆ ಪ್ರಚೋದನೆ ನೀಡುವ ಮಾತುಗಳನ್ನು ಯಾವ ರಾಜಕಾರಣಿಯೂ ಆಡಬಾರದು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 16, 2023 01:26 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.