ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಮಡುಗಟ್ಟಿದ್ದ ಅಸಮಾಧಾನವನ್ನು ಬಸನಗೌಡ ಯತ್ನಾಳ್ ಹೊರಹಾಕಿದರು!

ಈ ಸಂದರ್ಭದಲ್ಲಿ ಅವರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಒಮ್ಮೆ ಸಂಸತ್ತಿನಲ್ಲಿ ಹೇಳಿದ ಮಾತನ್ನು ಉಲ್ಲೇಖಿಸಿದರು. ನಿನ್ನೊಂದಿಗೆ ಯಾರೂ ಇಲ್ಲದಿದ್ದರೂ ಒಬ್ಬನೇ ಮುನ್ನುಗ್ಗು, ಆಗ ಜಗತ್ತೇ ನಿನ್ನ ಹಿಂದೆ ಬರುತ್ತದೆ ಅಂತ ಅವರು ಹೇಳಿದ್ದನ್ನು ಪಾಲಿಸಿಕೊಂಡು ಸಾಗುತ್ತಿರುವುದಾಗಿ ಶಾಸಕ ಹೇಳಿದರು. ರಾಜ್ಯದ ಎಲ್ಲ ಬಿಜೆಪಿ ನಾಯಕರ ಹುಳುಕುಗಳನ್ನು ವೀಕ್ಷಕರ ಮುಂದೆ ಬಯಲು ಮಾಡಿದ್ದಾಗಿ ಯತ್ನಾಳ್ ಹೇಳಿದರು.

ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಮಡುಗಟ್ಟಿದ್ದ ಅಸಮಾಧಾನವನ್ನು ಬಸನಗೌಡ ಯತ್ನಾಳ್ ಹೊರಹಾಕಿದರು!
|

Updated on:Nov 17, 2023 | 4:27 PM

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಬಿವೈ ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಾಧ್ಯಮದೆದುರು ಪ್ರತ್ಯಕ್ಷರಾದರು. ವಿಜಯಪುರ ಶಾಸಕ ಹೊರಗೆ ಕಾಣಿಸಿಕೊಳ್ಳಬೇಕಾದರೆ ದೆಹಲಿಯಿಂದ ವೀಕ್ಷಕರಾಗಿ ಆಗಮಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮತ್ತು ದುಷ್ಯಂತ್ ಕುಮಾರ್ ಗೌತಮ್  (Dushyant Kumar Goutam) ಅವರ ಮನೆಗೆ ಭೇಟಿ ನೀಡಬೇಕಾಯಿತು. ಯತ್ನಾಳ್ ಅವರಲ್ಲಿ ಯಾವ ಪರಿ ಅಸಮಾಧಾನ ಮಡುಗಟ್ಟಿದೆ ಅನ್ನೋದು ಅವರ ಮಾತುಗಳಲ್ಲಿ ವ್ಯಕ್ತವಾಗುತ್ತದೆ. ವಿಜಯೇಂದ್ರ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ಅವರು ಬಳಸುವ ಪದಗಳನ್ನು ಗಮನಿಸಿ. ಪರೋಕ್ಷವಾಗಿ ಅವರು ತಾನು ಬೇರೆಯವರ ಹಾಗೆ ಥರ್ಡ್ ಕ್ಲಾಸ್ ರಾಜಕಾರಣಿ ಅಲ್ಲ, ಅವರಂತೆ ಅಧ್ಯಕ್ಷ ಸ್ಥಾನ ಬೇಕು, ವಿಪಕ್ಷ ನಾಯಕನ ಸ್ಥಾನ ಬೇಕು ಅಂತ ಕೇಳೋದಿಲ್ಲ. ಅವರ ಹಾಗೆ ರಾಜಕಾರಣ ಮಾಡಿದ್ದರೆ, ಕೊಳಗೇರಿಯಲ್ಲಿ ಮನೆ ಕಟ್ಟಿಕೊಳ್ಳುವ ಸ್ಥಿತಿ ತನಗಿರುತ್ತಿರಲಿಲ್ಲ ಎಂದು ಯತ್ನಾಳ್ ಹೇಳಿದರು. ಈ ಸಂದರ್ಭದಲ್ಲಿ ಅವರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಒಮ್ಮೆ ಸಂಸತ್ತಿನಲ್ಲಿ ಹೇಳಿದ ಮಾತನ್ನು ಉಲ್ಲೇಖಿಸಿದರು. ನಿನ್ನೊಂದಿಗೆ ಯಾರೂ ಇಲ್ಲದಿದ್ದರೂ ಒಬ್ಬನೇ ಮುನ್ನುಗ್ಗು, ಆಗ ಜಗತ್ತೇ ನಿನ್ನ ಹಿಂದೆ ಬರುತ್ತದೆ ಅಂತ ಅವರು ಹೇಳಿದ್ದನ್ನು ಪಾಲಿಸಿಕೊಂಡು ಸಾಗುತ್ತಿರುವುದಾಗಿ ಶಾಸಕ ಹೇಳಿದರು. ರಾಜ್ಯದ ಎಲ್ಲ ಬಿಜೆಪಿ ನಾಯಕರ ಹುಳುಕುಗಳನ್ನು ವೀಕ್ಷಕರ ಮುಂದೆ ಬಯಲು ಮಾಡಿದ್ದಾಗಿ ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Fri, 17 November 23

Follow us
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್