ಸಂಕಷ್ಟದಲ್ಲಿ ಬಸನಗೌಡ ಯತ್ನಾಳ್, ಸಕ್ಕರೆ ಕಾರ್ಖಾನೆಗೆ ನೀಡಿರುವ ನೋಟೀಸ್​ಗೆ 24 ಗಂಟೆಗಳಲ್ಲಿ ಉತ್ತರಿಸಲು ಸೂಚನೆ

Updated on: Feb 17, 2024 | 10:52 AM

ಲಭ್ಯವಿರುವ ಮಾಹಿತಿಯ ಪ್ರಕಾರ ಸಿದ್ಧಸಿರಿ ಕಾರ್ಖಾನೆಯಲ್ಲಿ ಅನುಮತಿ ಪಡೆಯದೆ ಕಬ್ಬು ಅರೆಯಲಾಗಿದೆಯಂತೆ. ಕಬ್ಬು ಅರೆದಿರುವುದು ವಾಯು ನಿಯಂತ್ರಣ ಮಂಡಳಿ ಕಾಯ್ದೆಯ ಉಲ್ಲಂಘನೆ ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ ಬಜೆಟ್ ಮಂಡಿಸುವಾಗ ಶಾಸಕ ಯತ್ನಾಳ್ ಸದನದಲ್ಲಿದ್ದರು.

ಕಲಬುರಗಿ: ದೃಶ್ಯಗಳಲ್ಲಿ ಕಾಣುತ್ತಿರೋದು ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿರುವ ಸಿದ್ಧಸಿರಿ ಸಕ್ಕರೆ ಕಾರ್ಖಾನೆ (Siddha Siri Ethanol and Power). ಬಿಜೆಪಿ ಫೈರ್ ಬ್ರ್ಯಾಂಡ್ ನಾಯಕನೆಂದು ಗುರುತಿಸಿಕೊಳ್ಳುವ ಮತ್ತು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಇದರ ಮಾಲೀಕ. ಬಿಜೆಪಿ ನಾಯಕರು (BJP leaders) ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಹಿಂಜರಿಯುವ ಸಂಗತಿ ನಮಗೆಲ್ಲ ಗೊತ್ತಿದೆ. ಆದರೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆಯು ಪಾಟೀಲ್ ಮತ್ತು ಅವರ ಕಾರ್ಖಾನೆ ವಿರುದ್ಧ ನೋಟೀಸೊಂದನ್ನು ಜಾರಿ ಮಾಡಿದ್ದು ಕೇವಲ 24 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ ಸಿದ್ಧಸಿರಿ ಕಾರ್ಖಾನೆಯಲ್ಲಿ ಅನುಮತಿ ಪಡೆಯದೆ ಕಬ್ಬು ಅರೆಯಲಾಗಿದೆಯಂತೆ. ಕಬ್ಬು ಅರೆದಿರುವುದು ವಾಯು ನಿಯಂತ್ರಣ ಮಂಡಳಿ ಕಾಯ್ದೆಯ ಉಲ್ಲಂಘನೆ ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ ಬಜೆಟ್ ಮಂಡಿಸುವಾಗ ಶಾಸಕ ಯತ್ನಾಳ್ ಸದನದಲ್ಲಿದ್ದರು. ಬಜೆಟ್ ಅಧಿವೇಶನ ಸೋಮವಾರ ಪುನರಾರಂಭಗೊಳ್ಳುವುದರಿಂದ ಅವರು ವಿಜಯಪುರ ಅಥವಾ ಕಲಬುರಗಿಗೆ ಬಂದಿರುವ ಸಾಧ್ಯತೆಯೂ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More