ನಿಷ್ಠುರವಾಗಿ ಮಾತಾಡುವವರನ್ನು ಯಾವ ಪಕ್ಷವೂ ಇಟ್ಟುಕೊಳ್ಳಲ್ಲ, ಹಾಗಾಗೇ ಯತ್ನಾಳ್ ಬೆಲೆ ತೆತ್ತಿದ್ದಾರೆ: ಬಾಲಕೃಷ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Mar 27, 2025 | 4:46 PM

ತಾನು ಬಿಜೆಪಿ ಬಿಟ್ಟು ಹೊರಬಂದಾಗ ಅಲ್ಲಿನ್ನೂ ಕುಟುಂಬ ರಾಜಕಾರಣ ಶುರುವಾಗಿರಲಿಲ್ಲ, ಅದರೆ ನಂತರ ಸೇರಿದ ಜೆಡಿಎಸ್ ಪಕ್ಷ ದಲ್ಲಿ ಅದು ಶುರುವಾಗಿದ್ದರಿಂದ ಅದನ್ನೂ ಬಿಟ್ಟು ಕಾಂಗ್ರೆಸ್ ಗೆ ಬರಬೇಕಾಯಿತು ಎಂದು ಹೇಳಿದ ಬಾಲಕೃಷ್ಣ, ಯತ್ನಾಳ್ ಕಾಂಗ್ರೆಸ್ ಪಕ್ಷ ಸೇರುತ್ತೇನೆಂದರೆ ಸ್ವಾಗತಿಸಲು ತಾನ್ಯಾರೂ ಅಲ್ಲ, ಹೈಕಮಾಂಡ್ ಇದೆ, ರಾಜ್ಯ ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರಿದ್ದಾರೆ, ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ರಾಮನಗರ, ಮಾರ್ಚ್ 27: ನೇರ ಮತ್ತು ನಿಷ್ಠುರವಾಗಿ ಮಾತಾಡುವವರು ಯಾವ ಪಕ್ಷದಲ್ಲೂ ಇರಲಾಗಲ್ಲ, ನಿಷ್ಠುರವಾಗಿ ಮಾತಾಡಿದ್ದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ಹೇಳಿದರು. ಪಕ್ಷದಿಂದ ಉಚ್ಚಾಟನೆಗೊಳ್ಳುವುದು ಅವರಿಗೆ ಇದು ಮೊದಲ ಸಲವೇನಲ್ಲ, ಬಿಜೆಪಿ ಅವರನ್ನು ಜಿವಿತಾವಧಿಗೆ ವಜಾ ಮಾಡಲಾರದು, ಕರ್ನಾಟಕದಲ್ಲಿ ಅವರಿಲ್ಲದೆ ಅಧಿಕಾರಕ್ಕೆ ಬರೋದು ಸಾಧ್ಯವಿಲ್ಲ ಅಂತ ಬಿಜೆಪಿ ನಾಯಕರಿಗೂ ಗೊತ್ತಿದೆ ಎಂದು ಬಾಲಕೃಷ್ಣ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪಲ್ಟಿ ಹೊಡೆದ ಆಟೋವನ್ನು ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.