AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಅಕ್ಕಿ ಅನ್ನ ತಿಂದು, ಬಸ್ಸಲ್ಲಿ ಓಡಾಡ್ಕೊಂಡಿದ್ರೆ ಸಾಕಾ, ಉದ್ಯೋಗ ಬೇಡವಾ: ಸಿದ್ದರಾಮಯ್ಯ ಸರ್ಕಾರಕ್ಕೆ ಯತ್ನಾಳ್ ಪ್ರಶ್ನೆ

ಉಚಿತ ಅಕ್ಕಿ ಅನ್ನ ತಿಂದು, ಬಸ್ಸಲ್ಲಿ ಓಡಾಡ್ಕೊಂಡಿದ್ರೆ ಸಾಕಾ, ಉದ್ಯೋಗ ಬೇಡವಾ: ಸಿದ್ದರಾಮಯ್ಯ ಸರ್ಕಾರಕ್ಕೆ ಯತ್ನಾಳ್ ಪ್ರಶ್ನೆ

Ganapathi Sharma
|

Updated on: Sep 26, 2025 | 12:05 PM

Share

ದಾವಣಗೆರೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಳ್ ಯತ್ನಾಳ್ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೇಲಿಂದ ಮೇಲೆ ವಾಗ್ದಾಳಿ ನಡೆಸಿದ್ದು, ಪೊಲೀಸ್ ನೇಮಕಾತಿ ವಿಚಾರ ಪ್ರಸ್ತಾಪಿಸಿ ಕಿಡಿಕಾರಿದ್ದಾರೆ. ಪೊಲೀಸ್ ನೇಮಕಾತಿಯಲ್ಲಿ ವಯಸ್ಸಿನ ಮಿತಿಯ ಕುರಿತು ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದ ಅವರು, ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆಯೂ ಮಾತನಾಡಿದರು.

ದಾವಣಗೆರೆ, ಸೆಪ್ಟೆಂಬರ್ 26: ಪೊಲೀಸ್ ನೇಮಕಾತಿ ಮಾಡುತ್ತಿಲ್ಲ. ಧಾರವಾಡದಲ್ಲಿ ನೂರಾರು ಯುವಕರು ರೊಚ್ಚಿಗೆದ್ದಿದ್ದಾರೆ. ಹೀಗೇ ಆದರೆ, ಮಂತ್ರಿಗಳ ಮನೆಗೂ ನೇಪಾಳದಂತೆ ಯುವಕರು ದಾಳಿ ಮಾಡುವ ದಿನ ದೂರವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಉಚಿತ ಅಕ್ಕಿಯ ಅನ್ನ ಉಂಡುಕೊಂಡು ಬಸ್ಸಲ್ಲಿ ಓಡಾಡಿಕೊಂಡಿದ್ದರೆ ಸಾಕೇ? ಯುವಕರಿಗೆ ಉದ್ಯೋಗ ಬೇಡವೇ ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಪ್ರಶ್ನಿಸಿದರು. ಪೊಲೀಸ್ ನೇಮಕಾತಿಯನ್ನು ವಯಸ್ಸಿನ ಮಿತಿ ರಿಯಾಯಿತಿ ನೀಡುವಂತೆ ಆಗ್ರಹಿಸಿದರು.

‘ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ನಡೆಯುತ್ತಿದೆ. ಇದೇ ಕಾರಣದಿಂದ ನಾನು ಹೋದಲ್ಲೆಲ್ಲ ಜನ ಸೇರುತ್ತಿದ್ದಾರೆ. ನಾನು ಒಂಟಿ ಸಲಗ. ಆದರೂ ಜನ ಯಾಕೆ ಬರುತ್ತಾರೆ ಎಂದರೆ ಅರ್ಥ ಮಾಡಿಕೊಳ್ಳಿ’ ಎಂದು ಯತ್ನಾಳ್ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ