ಕೃತಕ ನಗೆಯೊಂದಿಗೆ ನಾರ್ಮಲ್ ಆಗಿದ್ದೇನೆಂದು ಹೇಳುವ ಪ್ರಯತ್ನ ಮಾಡಿದ ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 26, 2025 | 7:04 PM

ಪತ್ರ ಸಿಗುವ ಮೊದಲು ಹರ್ಷದಿಂದ ಬೀಗುತ್ತಿದ್ದ ಬಸನಗೌಡ ಯತ್ನಾಳ್ ಉಚ್ಚಾಟನೆಯ ವಿಷಯ ಗೊತ್ತಾಗುತ್ತಿದ್ದಂತೆ ಮ್ಲಾನವದನರಾದರು. ಕೃತಕ ನಗೆಯೊಂದಿಗೆ ನಾರ್ಮಲ್ ಆಗಿದ್ದೇನೆಂಬ ಸಂದೇಶ ರವಾನಿಸಲು ಪ್ರಯತ್ನಿಸಿದರಾದರೂ ನೋವು ಅವರ ಮುಖದಲ್ಲಿ ಸ್ಪಷ್ಟವಾಗಿ ಕಾಣುತಿತ್ತು. ಮುಂದೇನು ಅಂತ ಯೋಚಿಸಿಲ್ಲ, ಸದ್ಯಕ್ಕಂತೂ ವಾಪಸ್ಸು ಹೋಗುತ್ತೇನೆ ಎಂದಷ್ಟೇ ಅವರು ಮೀಡಿಯದವರಿಗೆ ಹೇಳಿದರು.

ದೆಹಲಿ, ಮಾರ್ಚ್ 26: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದನ್ನು ನಿರೀಕ್ಷಿಸಿರಲಿಲ್ಲ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು ಅವರನ್ನು ಕೂಡಲೇ ಜಾರಿಯಾಗುವಂತೆ 6-ವರ್ಷ ಅವಧಿಗೆ ಪಕ್ಷದಿಂದ ಉಚ್ಚಾಟಿಸಿದೆ. ಶೋಕಾಸ್ ನೋಟೀಸ್​ಗೆ ನೀವು ನೀಡಿರುವ ಉತ್ತರವನ್ನು ಪರಿಗಣಿಸಲಾಗಿದೆ, ವರ್ತನೆಯನ್ನು ತಿದ್ದಿಕೊಳ್ಳುವ ಬಗ್ಗೆ ನೀವು ಆಶ್ವಾಸನೆಯನ್ನು ನೀಡಿದರೂ ಪದೇಪದೆ ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿರುವುದರಿಂದ ನಿಮ್ಮ ನಡಾವಳಿಯನ್ನು ಗಂಭೀರವಾಗಿ ಪರಿಗಣಿಸಿ ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಹೇಳುವ ಪತ್ರವನ್ನು ಯತ್ನಾಳ್​ಗೆ ನೀಡಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹನಿ ಟ್ರ್ಯಾಪ್ ಪ್ರಕರಣದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ಏಜೆಂಟ್​​ನಂತೆ ವರ್ತಿಸಿದ್ದಾರೆ: ರೇಣುಕಾಚಾರ್ಯ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.