ಜೆಪಿಸಿಯ ಅಧಿಕಾರಿಗಳೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಂಡ ವಕ್ಫ್ ಹೋರಾಟದ ಯತ್ನಾಳ್ ತಂಡ

Updated on: Jan 06, 2025 | 6:46 PM

ಅಧಿಕಾರಿ ಮತ್ತು ಬಿಜೆಪಿ ಮುಖಂಡರ ಗುಂಪಿನಲ್ಲಿ ಬಸನಗೌಡ ಯತ್ನಾಳ್ ಕಾಣಿಸುವುದಿಲ್ಲ. ಸಂಸತ್ ಭವನದಿಂದ ಹೊರಡುವಾಗ ಪ್ರತಾಪ್ ಸಿಂಹ ಪ್ರಾಯಶಃ ಅಧಿಕಾರಿಗಳ ಕಾರಿನಲ್ಲಿ ಕೂತರು ಅಂತ ಕಾಣುತ್ತೆ. ಅಲ್ಲೇ ಅವರನ್ನು ಮತ್ತೊಂದು ಕಾರಲ್ಲಿ ಕೂರುವಂತೆ ಹೇಳಲಾಗುತ್ತದೆ. ಕಾರಿನಿಂದ ಇಳಿಯುವ ಮೈಸೂರಿನ ಮಾಜಿ ಸಂಸದ ಹಿಂದೆ ಬರುತ್ತಿದ್ದ ಯಾವ ಕಾರಲ್ಲಿ ಕೂತರು ಅನ್ನೋದೇ ಗೊತ್ತಾಗಲ್ಲ.

ದೆಹಲಿ: ನಾವು ಶನಿವಾರ ವರದಿ ಮಾಡಿದ ಹಾಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ರಾಜ್ಯದಲ್ಲಿ ವಕ್ಫ್ ಬೋರ್ಡ್ ವಿರುದ್ಧ ಎರಡನೇ ಹಂತದ ಹೋರಾಟ ಶುರುಮಾಡಿದೆ. ಅವರ ತಂಡದ ಕೆಲ ನಾಯಕರು ಇಂದು ಮಧ್ಯಾಹ್ನ ಸಂಸತ್ ಭವನದಲ್ಲಿ ಜೆಪಿಸಿಯ ಕೆಲ ಅಧಿಕಾರಿಗಳೊಂದಿಗೆ ಕಾಫಿ ಅಥವಾ ಟೀ ಹೀರುತ್ತಿರುವುದನ್ನು ನೋಡಬಹುದು. ಮಾಜಿ ಸಂಸದರಾದ ಪ್ರತಾಪ್ ಸಿಂಹ, ಬಿವಿ ನಾಯಕ್, ಶಾಸಕ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಮೊದಲಾದವರು ಅಧಿಕಾರಿಗಳೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಂಡರು ಎನ್ನಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More