ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ

Updated on: Jan 05, 2025 | 4:19 PM

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬದಲಾವಣೆ ಕೂಗು ಕೇಳಿಬರುತ್ತಿದೆ. ಇದರ ಮಧ್ಯ ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಕರ್ನಾಟಕ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ವಿಜಯೇಂದ್ರ ಬಣ ಹಾಗೂ ಬಸನೌಡ ಪಾಟೀಲ್ ಯತ್ನಾಳ್ ಬಣ ಪರೋಕ್ಷವಾಗಿ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ.

ವಿಜಯಪುರ, (ಜನವರಿ 05): ಪಕ್ಷದ ಅಧ್ಯಕ್ಷರ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಇದ್ದೇ ಇರುತ್ತೆ. ಈ ವಿಚಾರವಾಗಿ ಪ್ರಹ್ಲಾದ್ ಜೋಶಿ ಹೇಳಿರುವುದು ಸರಿಯಿದೆ. ಯಾರು ಅಧ್ಯಕ್ಷರು ಆಗುತ್ತಾರೆಂಬುದನ್ನು ಕೇಂದ್ರಕ್ಕೆ ಬಿಡುತ್ತೇವೆ. ಈಗ ಇರುವುದು ಹಂಗಾಮಿ ಅಧ್ಯಕ್ಷರು. ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ಹೇಳಿಕೆ ನೀಡಿರುವುದು ಸರಿಯಿದೆ. ಪ್ರಹ್ಲಾದ್ ಜೋಶಿ ನಮ್ಮ ಪಕ್ಷದ ನಿಯಮಗಳ ಬಗ್ಗೆ ಹೇಳಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ.

ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಜೋಶಿ ಅವರು ನಮ್ಮ ಪಕ್ಷದ ನಿಯಮಗಳ ಬಗ್ಗೆ ಹೇಳಿದ್ದಾರೆ. ಅದನ್ನು ವಿವಾದ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದ ಯತ್ನಾಳ್, ಚುನಾವಣೆ ಆಗಲ್ಲ. ಸಹಮತ ಮಾಡಿಕೊಂಡು ರಾಜ್ಯಾಧ್ಯಕ್ಷರ ಆಯ್ಕೆ ಮಾಡುವ ಪದ್ದತಿಯಿದೆ. ಚುನಾವಣಾ ಆಯೋಗದ ನಿಬಂಧನೆಗಳು ಇವೆ. ಈ ನಿಬಂಧನೆಗಳನ್ನು ಪಾಲನೆ ಮಾಡಿ ರಾಷ್ಟ್ರೀಯ ಆಧ್ಯಕ್ಷರ ಸೂಚನೆ ಮೇರೆಗೆ ಘೋಷಣೆ ಆಗುತ್ತದೆ. ಜಿಲ್ಲಾ ಘಟಕದ ಆಧ್ಯಕ್ಷರ ಬದಲಾವಣೆಯೂ ಆಗಲಿದೆ ಎಂದ ಬಾಂಬ್ ಸಿಡಿಸಿದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More