ಸಂತ್ರಸ್ತರಿಗೆ ಮನೆ ಕಟ್ಟಿಸಿಲ್ಲವೆಂದ ಸಿದ್ದರಾಮಯ್ಯಗೆ ತಾನು ಕಟ್ಟಿಸಿದ ಮನೆ ತೋರಿಸಿದ ಬಸವರಾಜ ಬೊಮ್ಮಾಯಿ

Updated on: Nov 05, 2024 | 4:17 PM

ಹಸೀ ಸುಳ್ಳುಗಳನ್ನು ಹೇಳುವ ಮೂಲಕ ಸಿದ್ದರಾಮಯ್ಯನವರು ತಮ್ಮ ಹುದ್ದೆಯ ಗೌರವಕ್ಕೆ ಚ್ಯುತಿ ತರುತ್ತಿದ್ದಾರೆ, ತಾನು ಮುಖ್ಯಮಂತ್ರಿಯಾಗಿದ್ದಾಗ 12,500 ಹೆಚ್ಚು ಮನೆಗಳನ್ನು ಕಟ್ಟಿಸಿರುವೆನೆಂದು ಬೊಮ್ಮಾಯಿ ಹೇಳಿದರು. ಬೊಮ್ಮಾಯಿ ನಂತರ ಮಾತಾಡಿದ ಬಸವಣ್ಣಮ್ಮ ಮನೆಯನ್ನು ಮಾಜಿ ಮುಖ್ಯಮಂತ್ರಿ ಕಟ್ಟಿಸಿರುವುದನ್ನು ಖಚಿತಪಡಿಸಿದರು.

ಹಾವೇರಿ: ಶಿಗ್ಗಾವಿ ಉಪ ಚುನಾವಣೆಯಲ್ಲಿ ತಮ್ಮ ಮಗ ಭರತ್ ಬೊಮ್ಮಾಯಿ ಪರ ಪ್ರಚಾರ ಮಾಡಿದ ಸಂಸದ ಬಸವರಾಜ ಬೊಮ್ಮಾಯಿ, ತಾನು ಮುಖ್ಯಮಂತ್ರಿಯಾಗಿದ್ದಾಗ ಒಂದೇಒಂದು ಮನೆಯನ್ನು ಸಂತ್ರಸ್ತರಿಗೆ ಕಟ್ಟಿಕೊಡಲಿಲ್ಲ ಅಂತ ನಿನ್ನೆ ಸಿದ್ದರಾಮಯ್ಯ ಸವಣೂರಲ್ಲಿ ಸುಳ್ಳು ಹೇಳಿದ್ದಾರೆ, 2021-22 ರಲ್ಲಿ ಪ್ರವಾಹ ಬಂದಿದ್ದಾಗ ಶಿಗ್ಗಾವಿ ತಾಲ್ಲೂಕಿನ ಹಿರೇಮನಕಟ್ಟಿ ಗ್ರಾಮದಲ್ಲಿ ಬಸವಣ್ಣಮ್ಮ ಮಾಳಪ್ಪನವರ್ ವಾಸವಾಗಿರುವ ಮನೆಯನ್ನು ತಾನೇ ಕಟ್ಟಿಸಿದ್ದು, ಈ ಒಂದು ಊರಲ್ಲೇ ತಾನು 300ಕ್ಕೂ ಹೆಚ್ಚು ಮನೆಕಟ್ಟಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ವಕ್ಫ್​ ಗುಮ್ಮ: ಅನ್ವರ್ ಮಾಣಿಪ್ಪಾಡಿ ವರದಿ ಮೇಲೆ SIT ಅಥವಾ CBI ತನಿಖೆಗೆ ಆಗ್ರಹಿಸಿದ ಬೊಮ್ಮಾಯಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More