Karnataka Assembly Polls: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬಸವರಾಜ ಬೊಮ್ಮಾಯಿಗೆ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಎದುರಾದ ಕ್ಷಣ ಹೇಗಿತ್ತು ಗೊತ್ತಾ?

Updated on: Apr 26, 2023 | 1:33 PM

ರಾಜ್ಯದ ಪ್ರಮುಖ ನಾಯಕರೆಲ್ಲ ಇಂದು ಬೆಳಗಾವಿಯಲ್ಲಿ ಠಳಾಯಿಸುತ್ತಿರುವುದು ಕುತೂಹಲ ಮೂಡಿಸಿದೆ.

ಬೆಳಗಾವಿ: ಚುನಾವಣಾ ಸಂದರ್ಭದಲ್ಲಿ ಎದುರಾಳಿಗಳ ಪಕ್ಷಗಳ ಪ್ರಮುಖ ನಾಯಕರು ಪರಸ್ಪರ ಎದುರಾದರೆ ಹೇಗೆ ವರ್ತಿಸುತ್ತಾರೆ. ನಾವಂದುಕೊಳ್ಳುವ ಹಾಗೆ ಅವರು ಮುಖ ತಿರುಗಿಸಿಕೊಂಡೇನೂ ಹೋಗುವುದಿಲ್ಲ, ಬದಲಿಗೆ ಮುಗಳ್ನಕ್ಕು, ಪರಸ್ಪರ ಕೈಕುಲುಕುತ್ತಾ ಉಭಯಕುಶಲೋಪರಿ ವಿಚಾರಿಸುತ್ತಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ನಡೆದಿದ್ದು ಅದೇ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾದಾಗ ಆತ್ಮೀಯವಾಗಿ ಕೈಕುಲುಕಿ ಹರಟಿದರು. ರಾಜ್ಯದ ಪ್ರಮುಖ ನಾಯಕರೆಲ್ಲ ಇಂದು ಬೆಳಗಾವಿಯಲ್ಲಿ ಠಳಾಯಿಸುತ್ತಿರುವುದು ಕುತೂಹಲ ಮೂಡಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More