ತನ್ನನ್ನು ರಾಜ್ಯಾಧ್ಯಕ್ಷ ಮಾಡಿದ್ದು ವರಿಷ್ಠರ ಅತ್ಯುತ್ತಮ ನಿರ್ಣಯ ಅಂತ ಬೊಮ್ಮಾಯಿ ಹೇಳಿದರು: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Nov 13, 2023 | 12:49 PM

ಲೋಕ ಸಭಾ ಚುನಾವಣೆ ಹತ್ತಿರದಲ್ಲಿರುವುದರಿಂದ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ರಾಜ್ಯದ ಎಲ್ಲ ಹಿರಿಯ ಮತ್ತು ಕಿರಿಯ ನಾಯಕರನ್ನು ಜೊಗೆಗೂಡಿಸಿಕೊಂಡು ಕೆಲಸ ಮಾಡಬೇಕೆಂದು ಬೊಮ್ಮಾಯಿ ಸಲಹೆ ನೀಡಿದ್ದಾರೆ ಎಂದು ಹೇಳಿದ ವಿಜಯೇಂದ್ರ, ಹೇಳಿದರು.

ಬೆಂಗಳೂರು: ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಬೆಳಕಿನ ಹಬ್ಬದ ಸಂದರ್ಭದಲ್ಲಿ ಹಿರಿಯ ನಾಯಕನ್ನು ಕಂಡು ಮಾತಾಡಿ, ಆಶೀರ್ವಾದ (blessings) ಮತ್ತು ಮಾರ್ಗದರ್ಶನ ಪಡೆದಿರೋದು ಬಹಳ ಸಂತೋಷವೆನಿಸುತ್ತಿದೆ ಎಂದು ಹೇಳಿದರು. ತನ್ನನ್ನು ರಾಜ್ಯಾಧ್ಯಕ್ಷ ಮಾಡುವ ಮೂಲಕ ಕೊನೆಗೂ ಪಕ್ಷದ ವರಿಷ್ಠರು ಒಂದು ಅತ್ಯುತ್ತಮ ನಿರ್ಣಯ ತೆಗೆದುಕೊಂಡಿದ್ದಾರೆ, ತನ್ನನ್ನು ಆಯ್ಕೆ ಮಾಡಿದ್ದು ರಾಜ್ಯ ಬಿಜೆಪಿ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಬೊಮ್ಮಾಯಿ ಜೀ ಹೇಳಿದರು ಅಂತ ವಿಜಯೇಂದ್ರ ತಿಳಿಸಿದರು. ಲೋಕ ಸಭಾ ಚುನಾವಣೆ ಹತ್ತಿರದಲ್ಲಿರುವುದರಿಂದ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ರಾಜ್ಯದ ಎಲ್ಲ ಹಿರಿಯ ಮತ್ತು ಕಿರಿಯ ನಾಯಕರನ್ನು ಜೊಗೆಗೂಡಿಸಿಕೊಂಡು ಕೆಲಸ ಮಾಡಬೇಕೆಂದು ಬೊಮ್ಮಾಯಿ ಸಲಹೆ ನೀಡಿದ್ದಾರೆ ಎಂದು ಹೇಳಿದ ವಿಜಯೇಂದ್ರ, ಬುಧವಾರದಂದು ತಾನು ಅಧಿಕೃತವವಾಗಿ ಪಕ್ಷದ ರಾಜ್ಯಾಧ್ಯಕ್ಷನಾಗಿ ಅಧಿಕಾರವಹಿಸಿಕೊಳ್ಳಲಿರುವ ಸಮಾರಂಭಕ್ಕೆ ಅಗಮಿಸಿ ಆಶೀರ್ವದಿಸಬೇಕೆಂದು ಕೋರಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.