ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸದ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ ಅಂತಷ್ಟೇ ರಾಯರೆಡ್ಡಿ ಹೇಳಿರುವುದು: ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸದ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ ಅಂತಷ್ಟೇ ರಾಯರೆಡ್ಡಿ ಹೇಳಿರುವುದು: ಸಿದ್ದರಾಮಯ್ಯ
|

Updated on: Jan 10, 2024 | 7:27 PM

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸದ ಮೇಲೆ ಹೆಚ್ಚುವರಿ ಬೀಳುತ್ತೆ ಅಂತ ರಾಯರೆಡ್ಡಿ ಹೇಳಿದ್ದಾರೆ, ಅದರರ್ಥ ಬಿಜೆಪಿಯವರು ಹೇಳುವ ಹಾಗೆ, ಸರ್ಕಾರದಲ್ಲಿ ಹಣವಿಲ್ಲ ಅಂತಲ್ಲ, ಬೊಕ್ಕಸವೇನೂ ಖಾಲಿಯಾಗಿಲ್ಲ, ಸರ್ಕಾರದ ಎಂದಿನ ಕಾರ್ಯಕ್ರಮಗಳು ಮೊದಲಿನ ಹಾಗೆಯೇ ಜಾರಿಯಲ್ಲಿರುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು,

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಪತ್ರಕರ್ತೆಯೊಬ್ಬರು ಪ್ರಶ್ನೆ ಕೇಳಿದಾಗ, ಅದನ್ನು ತಾನು ಉತ್ತರಿಸಬೇಕೋ ಅಥವಾ ಮುಖ್ಯಮಂತ್ರಿ ಉತ್ತರಿಸಬೇಕೋ ಅಂತ ಡಿಕೆ ಶಿವಕುಮಾರ್ (DK Shivakumar) ಗೊಂದಲಕ್ಕೆ ಬಿದ್ದರು. ಅವರು ಸಿದ್ದರಾಮಯ್ಯನವರಿಗೆ (Siddaramaiah) ಸನ್ನೆ ಮೂಲಕ ಹೇಳಿದಾಗ ಅವರು ಆಯಮ್ಮ ನನಗಲ್ಲ, ನಿನಗೆ ಕೇಳಿದ್ದಯ್ಯ, ನೀನೇ ಉತ್ತರಿಸು ಅಂತ ತಮಾಷೆ ಮಾಡುತ್ತಾರೆ. ನಂತರ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಉತ್ತರಿಸುವ ಸಿದ್ದರಾಮಯ್ಯ, ತಮ್ಮ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ (Basavaraj Rayareddy) ನೀಡಿದ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ, ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸದ ಮೇಲೆ ಹೆಚ್ಚುವರಿ ಬೀಳುತ್ತೆ ಅಂತ ಅವರು ಹೇಳಿದ್ದಾರೆ, ಅದರರ್ಥ ಬಿಜೆಪಿಯವರು ಹೇಳುವ ಹಾಗೆ, ಸರ್ಕಾರದಲ್ಲಿ ಹಣವಿಲ್ಲ ಅಂತಲ್ಲ, ಬೊಕ್ಕಸವೇನೂ ಖಾಲಿಯಾಗಿಲ್ಲ, ಸರ್ಕಾರದ ಎಂದಿನ ಕಾರ್ಯಕ್ರಮಗಳು ಮೊದಲಿನ ಹಾಗೆಯೇ ಜಾರಿಯಲ್ಲಿರುತ್ತವೆ, ಅವುಗಳ ಜೊತೆ ಗ್ಯಾರಂಟಿಗಳು ಸೇರಿರುವುದರಿಂದ ಖಜಾನೆ ಮೇಲೆ ಹೆಚ್ಚುವರಿ ಬಿದ್ದಿದೆ ಅಂತ ರಾಯರೆಡ್ಡಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು. ಬಜೆಟ್ ಮಂಡಿಸಿರುವ ತನಗೆ ಎಲ್ಲ ಯೋಜನೆಗಳ ಖರ್ಚುವೆಚ್ಚದ ಸಂಪೂರ್ಣ ಜ್ಞಾನವಿದೆ, ಗ್ಯಾರಂಟಿ ಯೋಜನೆಗಳಿಂದಾಗಿ ಬೇರೆ ಯಾವುದೇ ಕಾರ್ಯಕ್ರಮ ನಿಂತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ