Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?

Updated on: Apr 02, 2025 | 7:11 AM

ಬುಧವಾರದಂದು ಕಾಲಭೈರವನಿಗೆ ಪೂಜೆ ಸಲ್ಲಿಸುವುದು ಮತ್ತು ಅವಲಕ್ಕಿ-ಕಲ್ಲುಸಕ್ಕರೆ ಪಾಯಸ ನೈವೇದ್ಯ ಅರ್ಪಿಸುವುದು ದಾರಿದ್ರ್ಯ, ರೋಗ ಮತ್ತು ತೊಂದರೆಗಳಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಹೀಗೆ ಐದು ಬುಧವಾರಗಳ ಕಾಲ ಮಾಡುವುದರಿಂದ ಶಾಶ್ವತ ಪರಿಹಾರ ಸಿಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಈ ಬಗ್ಗೆ ಗುರೂಜಿ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಏಪ್ರಿಲ್​ 02: ಕಾಲಭೈರವನು ಶಿವನ 64 ರೂಪಗಳಲ್ಲಿ ಒಂದು. ಕಾಲವನ್ನು ನಿಯಂತ್ರಿಸುವ ಶಕ್ತಿಯನ್ನು ಹೊಂದಿದ್ದಾನೆ ಎಂದು ನಂಬಲಾಗುತ್ತೆ. ಅನೇಕರು ಕಾಲಭೈರವನ ಆರಾಧನೆಯ ಮೂಲಕ ತಮ್ಮ ಸಂಕಷ್ಟಗಳಿಂದ ಮುಕ್ತಿ ಪಡೆಯಲು ಪ್ರಯತ್ನಿಸುತ್ತಾರೆ. ಬುಧವಾರದ ದಿನ ಕಾಲಭೈರವನಿಗೆ ಪೂಜೆ ಮತ್ತು ನೈವೇದ್ಯವನ್ನು ಅರ್ಪಿಸಲಾಗುತ್ತದೆ. ಈ ನೈವೇದ್ಯದಲ್ಲಿ ಅವಲಕ್ಕಿ ಮತ್ತು ಕಲ್ಲುಸಕ್ಕರೆಯಿಂದ ತಯಾರಿಸಿದ ಪಾಯಸ ಪ್ರಮುಖವಾಗಿದೆ. ಈ ನೈವೇದ್ಯವನ್ನು ಶಿವ ದೇವಸ್ಥಾನದಲ್ಲಿ ಅರ್ಪಿಸಬಹುದು ಅಥವಾ ಮನೆಯಲ್ಲಿಯೇ ಅರ್ಪಿಸಿ ಪ್ರಾರ್ಥನೆ ಸಲ್ಲಿಸಬಹುದು. ಐದು ಬುಧವಾರಗಳು ಈ ಪೂಜೆಯನ್ನು ಮಾಡುವುದರಿಂದ ಜೀವನದಲ್ಲಿನ ತೊಂದರೆಗಳಿಂದ ಮುಕ್ತಿ ಪಡೆಯಬಹುದು ಎಂದು ನಂಬಲಾಗುತ್ತೆ.

ಮತ್ತಷ್ಟು ಅಧ್ಯಾತ್ಮ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More