ತುಕಾಲಿಯನ್ನು ಮುಖ್ಯ ದ್ವಾರದ ಬಳಿಗೆ ತಳ್ಳಿ ಮನೆ ಬಾಗಿಲು ಹಾಕಿಕೊಂಡ ಬಿಗ್​ ಬಾಸ್​ ಸ್ಪರ್ಧಿಗಳು

Updated on: Dec 29, 2023 | 8:36 PM

ಬಿಗ್​ ಬಾಸ್​ ಮನೆಯಲ್ಲಿ ಯಾವಾಗ ಏನು ಆಗುತ್ತದೆ ಎಂಬುದನ್ನು ಊಹಿಸುವುದು ಕಷ್ಟ. ಒಂದೇ ಕ್ಷಣದಲ್ಲಿ ಆಟದ ಸ್ವರೂಪ ಬದಲಾಗಬಹುದು. ತುಕಾಲಿ ಸಂತೋಷ್​ ಅವರನ್ನು ಮುಖ್ಯ ದ್ವಾರದ ಕಡೆಗೆ ತಳ್ಳಲಾಗಿದೆ. ಬಳಿಕ ಗಾಜಿನ ಬಾಗಿಲನ್ನು ಮುಚ್ಚಿಕೊಳ್ಳಲಾಗಿದೆ. ಇದರಿಂದ ತುಕಾಲಿ ಸಂತೋಷ್​ ಅವರಿಗೆ ಆತಂಕ ಆಗಿದೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ವಾತಾವರಣ ಈಗ ಕೊಂಚ ತಿಳಿಯಾಗಿದೆ. ಮೊದಲಿನಂತೆ ಮಾತಿನ ಚಕಮಕಿ ನಡೆಯುತ್ತಿಲ್ಲ. ಎಲ್ಲರೂ ಹಾಸ್ಯದ ದಾಟಿಯಲ್ಲೇ ಮಾತನಾಡುತ್ತಿದ್ದಾರೆ. ತುಕಾಲಿ ಸಂತೋಷ್​ (Tukali Santhosh) ಅವರು ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಮನೆ ಮಂದಿಯಲ್ಲೇ ಸೇರಿ ಅವರಿಗೆ ಸ್ವಲ್ಪ ಕೀಟಲೆ ಮಾಡಿದ್ದಾರೆ. ತುಕಾಲಿ ಸಂತೋಷ್​ ಅವರನ್ನು ಮುಖ್ಯ ದ್ವಾರದ ಕಡೆಗೆ ತಳ್ಳಲಾಗಿದೆ. ಬಳಿಕ ಗಾಜಿನ ಬಾಗಿಲನ್ನು ಮುಚ್ಚಿಕೊಳ್ಳಲಾಗಿದೆ. ಇದರಿಂದ ತುಕಾಲಿ ಸಂತೋಷ್​ ಅವರಿಗೆ ಆತಂಕ ಆಗಿದೆ. ಈ ಸಂಚಿಕೆ ಡಿಸೆಂಬರ್​ 29ರಂದು ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ‘ಜಿಯೋ ಸಿನಿಮಾ’ದಲ್ಲಿ ಉಚಿತವಾಗಿ ಲೈವ್​ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More