ಬಿಗ್ ಬಾಸ್ ಮುಗಿದರೂ ಗಿಲ್ಲಿನ ಕೆಣಕಿದ ಅಶ್ವಿನಿ ಗೌಡ; ಖಡಕ್ ತಿರುಗೇಟು ಕೊಟ್ಟ ಪಳಾರ್

Edited By:

Updated on: Jan 19, 2026 | 10:48 PM

ಗಿಲ್ಲಿ ಗೆಲುವಿನ ನಂತರ ಅಶ್ವಿನಿ ಗೌಡ ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. ಗಿಲ್ಲಿ ನಟ ಬಡವನ ರೀತಿ ನಟಿಸಿದ್ದರು ಎಂಬ ಅರ್ಥದಲ್ಲಿ ಅಶ್ವಿನಿ ಮಾತನಾಡಿದ್ದಾರೆ. ಆ ಮೂಲಕ ಬಿಗ್ ಬಾಸ್ ಮುಗಿದ ಮೇಲೂ ಅವರು ಕೆಣಕಿದ್ದಾರೆ. ಅಶ್ವಿನಿ ನೀಡಿದ ಹೇಳಿಕೆಗೆ ಗಿಲ್ಲಿ ತಿರುಗೇಟು ನೀಡಿದ್ದಾರೆ.

ಗಿಲ್ಲಿ ನಟ ಅವರ ಗೆಲುವಿನ ಬಳಿಕ ಅಶ್ವಿನಿ ಗೌಡ (Ashwini Gowda) ಅವರು ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. ಗಿಲ್ಲಿ ನಟ ಬಡವನ ರೀತಿ ನಟಿಸಿದ್ದರು ಎಂಬ ಅರ್ಥದಲ್ಲಿ ಅಶ್ವಿನಿ ಮಾತಾಡಿದ್ದಾರೆ. ಆ ಮೂಲಕ ಬಿಗ್ ಬಾಸ್ (BBK 12) ಮುಗಿದ ಮೇಲೂ ಅವರು ಕೆಣಕಿದ್ದಾರೆ. ಅಶ್ವಿನಿ ಗೌಡ ಅವರ ಈ ಹೇಳಿಕೆಗೆ ಗಿಲ್ಲಿ ನಟ ಖಡಕ್ ತಿರುಗೇಟು ನೀಡಿದ್ದಾರೆ. ‘ಮೇಡಂ ಏನು ಹೇಳಿದ್ದಾರೋ ನಾನು ನೋಡಿಲ್ಲ. ಒಂದು ವೇಳೆ ಅವರು ಹೇಳಿದ್ದರೆ, ನಾನು ಬಡವ ಅಂತ ಯಾವತ್ತೂ ಹೇಳಿಕೊಂಡಿಲ್ಲ. ನಾನು ಬನಿಯನ್ ಹಾಕಿಕೊಂಡಿದ್ದಕ್ಕೆ ಬಡವ ಅಂತ ಹೇಳೋಕೆ ಆಗಲ್ಲ. ಶ್ರೀಮಂತರು ಬನಿಯನ್, ನೈಟ್ ಪ್ಯಾಂಟ್, ಚಡ್ಡಿ ಹಾಕಲ್ವಾ? ಮೇಡಂ ಮಾತಿನ ಭರದಲ್ಲಿ ಆ ರೀತಿ ಹೇಳಿರಬಹುದು’ ಎಂದು ಬಿಗ್ ಬಾಸ್ ಮನೆಯೊಳಗಿನ ರೀತಿಯೇ ಗಿಲ್ಲಿ ನಟ (Gilli Nata) ಅವರು ತಿರುಗೇಟು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More