AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಕಾಲದಲ್ಲಿ ಸೋಂಕಿತರ ಶವಸಂಸ್ಕಾರ ಮಾಡಬೇಡಿ -ಕುಟುಂಬಸ್ಥರ ಡಿಮ್ಯಾಂಡ್​ ತಂದಿಟ್ಟ ಫಜೀತಿ

[lazy-load-videos-and-sticky-control id=”pJJwzDQ6zwo”] ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಹರಡುತ್ತಲೇ ಇದೆ. ಇನ್ನೂ ಇದರಿಂದ ಮುಕ್ತಿ ಸಿಕ್ಕಿಲ್ಲ. ಅದರಲ್ಲೂ ಕೊರೊನಾದಿಂದ ಮೃತಪಡುತ್ತಿರುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಹೀಗಾಗಿ ಮೃತರ ಅಂತ್ಯ ಸಂಸ್ಕಾರ ಮಾಡುವುದಕ್ಕೆ ಸರತಿ ಸಾಲಿನಲ್ಲಿ ಗಂಟೆ ಗಂಟೆಗಳ ಕಾಲ ಕಾಯ ಬೇಕಾಗಿದೆ. ಅದರಲ್ಲೂ ಮೃತ ಸೋಂಕಿತರ ಸಂಬಂಧಿಕರು ರಾಹುಕಾಲ ನೋಡಿ ಅಂತ್ಯಕ್ರಿಯೆ ನೆರವೇರಿಸುತ್ತಿರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣವಾಗಿದೆ. ರಾಹುಕಾಲದಲ್ಲಿ ಸೋಂಕಿತರ ಮೃತದೇಹಗಳ ಶವಸಂಸ್ಕಾರಕ್ಕೆ ಕುಟುಂಬಸ್ಥರು ಒಪ್ಪುತ್ತಿಲ್ಲ. ಜೊತೆಗೆ, ಮೃತ ಸೋಂಕಿತರ ಮುಖ ತೋರಿಸುವಂತೆ ಹಾಗೂ […]

ರಾಹುಕಾಲದಲ್ಲಿ ಸೋಂಕಿತರ ಶವಸಂಸ್ಕಾರ ಮಾಡಬೇಡಿ -ಕುಟುಂಬಸ್ಥರ ಡಿಮ್ಯಾಂಡ್​ ತಂದಿಟ್ಟ ಫಜೀತಿ
ಆಯೇಷಾ ಬಾನು
| Edited By: |

Updated on:Aug 23, 2020 | 2:53 PM

Share

[lazy-load-videos-and-sticky-control id=”pJJwzDQ6zwo”]

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಹರಡುತ್ತಲೇ ಇದೆ. ಇನ್ನೂ ಇದರಿಂದ ಮುಕ್ತಿ ಸಿಕ್ಕಿಲ್ಲ. ಅದರಲ್ಲೂ ಕೊರೊನಾದಿಂದ ಮೃತಪಡುತ್ತಿರುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಹೀಗಾಗಿ ಮೃತರ ಅಂತ್ಯ ಸಂಸ್ಕಾರ ಮಾಡುವುದಕ್ಕೆ ಸರತಿ ಸಾಲಿನಲ್ಲಿ ಗಂಟೆ ಗಂಟೆಗಳ ಕಾಲ ಕಾಯ ಬೇಕಾಗಿದೆ. ಅದರಲ್ಲೂ ಮೃತ ಸೋಂಕಿತರ ಸಂಬಂಧಿಕರು ರಾಹುಕಾಲ ನೋಡಿ ಅಂತ್ಯಕ್ರಿಯೆ ನೆರವೇರಿಸುತ್ತಿರುವುದರಿಂದ ಸಮಸ್ಯೆ ಮತ್ತಷ್ಟು ಉಲ್ಬಣವಾಗಿದೆ.

ರಾಹುಕಾಲದಲ್ಲಿ ಸೋಂಕಿತರ ಮೃತದೇಹಗಳ ಶವಸಂಸ್ಕಾರಕ್ಕೆ ಕುಟುಂಬಸ್ಥರು ಒಪ್ಪುತ್ತಿಲ್ಲ. ಜೊತೆಗೆ, ಮೃತ ಸೋಂಕಿತರ ಮುಖ ತೋರಿಸುವಂತೆ ಹಾಗೂ ಪೂಜೆ ಮಾಡಲು ಅವಕಾಶ ನೀಡುವಂತೆ ಕುಟುಂಬಸ್ಥರು ಮತ್ತು ಸಂಬಂಧಿಕರು ಒತ್ತಾಯ ಮಾಡುತ್ತಿದ್ದಾರಂತೆ.

ಈ ಹಿನ್ನೆಲೆಯಲ್ಲಿ ವಿದ್ಯುತ್ ಚಿತಾಗಾರಗಳ ಬಳಿ ಉಳಿದ ಮೃತರ ಕುಟುಂಬಸ್ಥರು ಸರತಿ ಸಾಲಿನಲ್ಲಿ ನಿಲ್ಲಬೇಕಾದ ಸ್ಥಿತಿ ಉಂಟಾಗಿದೆ. ಇಂತಹದೊಂದು ಸಮಸ್ಯೆ ಹೆಬ್ಬಾಳದ ವಿದ್ಯುತ್ ಚಿತಾಗಾರದಲ್ಲಿ ಎದುರಾಗಿತ್ತು. ಹೀಗಾಗಿ ವಿದ್ಯುತ್ ಚಿತಾಗಾರಗಳಿಗೆ BBMP ಆಯುಕ್ತ ಮಂಜುನಾಥ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಈ ವೇಳೆ ಇಂತಹ ಸಮಸ್ಯೆಗಳ ಬಗ್ಗೆ ಚಿತಾಗಾರದ ಸಿಬ್ಬಂದಿ ಆಯುಕ್ತರ ಬಳಿ ಹಂಚಿಕೊಂಡಿದ್ದಾರೆ. ಶವಸಂಸ್ಕಾರಕ್ಕೆ ರಾಹುಕಾಲ ನೋಡುವವರನ್ನು ಪಕ್ಕದಲ್ಲಿ ನಿಲ್ಲಿಸಿ ಉಳಿದ ಮೃತದೇಹಗಳ ಅಂತ್ಯಕ್ರಿಯೆ ಮಾಡಿ. ಸರತಿ ಸಾಲಲ್ಲಿ ನಿಲ್ಲುವ ಸ್ಥಿತಿ ನಿರ್ಮಿಸಬೇಡಿ ಎಂದು ಆಯುಕ್ತರು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

Published On - 11:44 am, Sun, 23 August 20

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!