AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮಳೆ ಸೃಷ್ಟಿಸುತ್ತಿರುವ ಅನಾಹುತಗಳ ಮೇಲೆ ಬೆಳಕು ಚೆಲ್ಲಿದ ಖ್ಯಾತ ವಕೀಲ ಜಗದೀಶ್

ಬೆಂಗಳೂರಲ್ಲಿ ಮಳೆ ಸೃಷ್ಟಿಸುತ್ತಿರುವ ಅನಾಹುತಗಳ ಮೇಲೆ ಬೆಳಕು ಚೆಲ್ಲಿದ ಖ್ಯಾತ ವಕೀಲ ಜಗದೀಶ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Oct 22, 2024 | 12:30 PM

Share

ಕೊಡಿಗೇಹಳ್ಳಿಯ ಕೆರೆಯನ್ನು ಶೇಕಡಾ 40ರಷ್ಟು ಒತ್ತುವರಿ ಮಾಡಿಕೊಳ್ಳಲಾಗಿದೆ, ಪ್ರದೇಶದ ರಾಜಾಕಾಲುವೆಗಳ ಮೇಲೆ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗಿದೆ, ಕೆಂಪೇಗೌಡ ಅವರ ಕಾಲದಲ್ಲಿ ಅಪಾರ ಸಂಖ್ಯೆಯಲ್ಲಿದ್ದ ಕೆರೆಗಳು ಈಗ ಬೆರಳೆಣಿಕೆಯಷ್ಟು ಮಾತ್ರ ಉಳಿದಿವೆ ಎಂದು ಜಗದೀಶ್ ಹೇಳುತ್ತಾರೆ.

ಬೆಂಗಳೂರು: ಬಾಯಿ ಭದ್ರವಿಲ್ಲದ ಕಾರಣ ಬಿಗ್​ಬಾಸ್ ಕನ್ನಡ ಕಾರ್ಯಕ್ರಮದಿಂದ ಹೊರಬಿದ್ದಿರುವ ಬೆಂಗಳೂರಿನ ಖ್ಯಾತ ವಕೀಲ ಕೆಎನ್ ಜಗದೀಶ್ ನಗರದಲ್ಲಿ ಮಳೆ ಸೃಷ್ಟಿಸುತ್ತಿರುವ ಅವಾಂತರಗಳ ಬಗ್ಗೆ ಧ್ವನಿಯೆತ್ತಿದ್ದಾರೆ. ಪ್ರತಿಷ್ಠಿತ ಏರಿಯಾಗಳೆನಿಸಿರುವ ಭದ್ರಪ್ಪ ಲೇಔಟ್, ಕೊಡಿಗೇಹಳ್ಳಿ ಮತ್ತು ಟಾಟಾ ನಗರಗಳಲ್ಲಿ ಅಕ್ರಮವಾಗಿ ಅಪಾರ್ಟ್​​ಮೆಂಟ್​ ಗಳನ್ನು ಕಟ್ಟಿರುವುದರಿಂದ ಮಳೆನೀರು ರಸ್ತೆ ಮತ್ತು ಮನೆಗಳಿಗೆ ನುಗ್ಗುತ್ತಿದೆ ಎಂದು ಜಗದೀಶ್ ಹೇಳುತ್ತಾರೆ. ಈ ಪ್ರದೇಶಗಳಲ್ಲಿನ ಭೂ ಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಕೈಜೋಡಿಸಿರುವರೆಂದು ಖ್ಯಾತ ಲಾಯರ್ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜಗದೀಶ್ ವಿರುದ್ಧ ಬೆಂಗಳೂರು ವಕೀಲರ ಸಂಘ ಗರಂ; ಕಲರ್ಸ್ ವಾಹಿನಿಗೆ ಬರೆದ ಪತ್ರದಲ್ಲಿ ಏನಿದೆ?

Published on: Oct 22, 2024 11:38 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.