ಒಳ ಮೀಸಲಾತಿ ಸಮೀಕ್ಷೆಗೆ ಹೋದ ಪಾಲಿಕೆ ಸಿಬ್ಬಂದಿಯಿಂದ ಗೂಂಡಾವರ್ತನೆ, ನಿವಾಸಿಗಳ ಮೇಲೆ ಹಲ್ಲೆ

Updated on: Jul 03, 2025 | 1:10 PM

ಯಾವ ಪುರುಷಾರ್ಥಕ್ಕಾಗಿ ಸರ್ಕಾರ ಸಮೀಕ್ಷೆಯನ್ನು ಗೂಂಡಾಗಳಿಂದ ಮಾಡಿಸುತ್ತಿದೆ ಎಂದು ಬೆಂಗಳೂರು ಜನ ಪ್ರಶ್ನಿಸುತ್ತಿದ್ದಾರೆ. ಸಮೀಕ್ಷೆಗೆ ಕಳಿಸಿರುವ ಸಿಬ್ಬಂದಿಗೆ ಜನರೊಂದಿಗೆ ಹೇಗೆ ವರ್ತಿಸಬೇಕೆಂದು ತರಬೇತಿಯೇನಾದರೂ ನೀಡಲಾಗಿದೆಯೇ ಅನ್ನೋದು ಮುಖ್ಯ ಪ್ರಶ್ನೆ. ಸರ್ವೇ ಮಾಡದೆ ಮನೆಗಳಿಗೆ ಸ್ಟಿಕ್ಕರ್ ಅಂಟಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ.

ಬೆಂಗಳೂರು, ಜುಲೈ 3: ಒಳಮೀಸಲಾತಿ ಸರ್ವೇ ಒಂದು ಮಹತ್ತರ ಮತ್ತು ಸೂಕ್ಷ್ಮ ಕೆಲಸ, ಇದನ್ನು ಬಿಬಿಎಂಪಿಯ ಕೆಲ ಸಿಬ್ಬಂದಿ (BBMP staff) ಅದರ ಮಹತ್ವ ಅರಿಯದೆ ಸರ್ವೆ ಹೋದ ಕಡೆ ಅಲ್ಲಿನ ಮನೆಗಳಲ್ಲಿ ವಾಸವಾಗಿರುವ ಜನರನ್ನು ಮಾತಾಡಿಸದೆ, ವಿವರಗಳನ್ನು ಪಡೆಯದೆ ಸರ್ವೇ ಆಗಿದೆ ಎಂಬ ಸ್ಟಿಕ್ಕರ್ ಮೆತ್ತಿ ಹೋಗುತ್ತಿದ್ದಾರೆ. ಏನನ್ನೂ ವಿಚಾರಿಸದೆ ಸ್ಟಿಕ್ಕರ್ ಅಂಟಿಸುತ್ತಿದ್ದೀರಲ್ಲ ಸ್ವಾಮಿ ಅಂತ ನಿವಾಸಿಗಳು ಪ್ರಶ್ನಿಸಿದರೆ ಪಾಲಿಕೆ ಸಿಬ್ಬಂದಿ ಹಲ್ಲೆ ನಡೆಸಲು ಮುಂದಾಗಿ ಗೂಂಡಾಗಿರಿಯನ್ನು ಪ್ರದರ್ಶಿಸುತ್ತಿದ್ದಾರೆ. ಅಂಥದೊಂದು ಘಟನೆ ನಗರದ ಸಾರ್ವಭೌಮನಗರದಲ್ಲಿ ನಡೆದಿದ್ದು ಸಿಸಿಟಿವಿ ಕೆಮೆರಾವೊಂದರಲ್ಲಿ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ:    ಎಸ್​ಸಿ ಒಳ ಮೀಸಲಾತಿ ಜಾರಿ ಮಾಡಿದ ಮೊದಲ ರಾಜ್ಯ ಎನಿಸಿಕೊಂಡ ತೆಲಂಗಾಣ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More