ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಾಲಿನಿಂದ ಇಳೆಗೆ ಇಳಿದ ಮಳೆಗೆ ಕೋಡಿ ಬಿದ್ದ ಮದಗದಕೆರೆ ಸೊಬಗು ನೋಡಿ!

Edited By: ಸಾಧು ಶ್ರೀನಾಥ್​

Updated on: Oct 05, 2023 | 8:23 PM

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುರಿದ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ಜೀವನಾಡಿಯಾಗಿರುವ ಮದಗದಕೆರೆ. ಕೋಡಿ ಬಿದ್ದಿದೆ. 2500 ಎಕರೆ ವಿಸ್ತೀರ್ಣದಲ್ಲಿರುವ ಬೃಹತ್ ಮದಗದಕೆರೆಗೆ ಗ್ರಾಮಸ್ಥರು ಬಾಗಿನ ಅರ್ಪಿಸಿ ಸಂಭ್ರಮಿಸಿದ್ದಾರೆ. ಲಕ್ಷಾಂತರ ರೈತರ ಆಧಾರವಾಗಿರುವ ಮದಗದಕೆರೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪವಿದೆ.

ಪಶ್ಚಿಮ ಘಟ್ಟಗಳ ಸಾಲಿನಲ್ಲಿ (Western Ghats) ಸುರಿದ ಮಳೆಗೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಬಯಲುಸೀಮೆ ಭಾಗದ ಜೀವನಾಡಿಯಾಗಿರುವ ಮದಗದಕೆರೆ. ಕೋಡಿ ಬಿದ್ದಿದೆ. 2500 ಎಕರೆ ವಿಸ್ತೀರ್ಣದಲ್ಲಿರುವ ಬೃಹತ್ ಮದಗದಕೆರೆಗೆ ಗ್ರಾಮಸ್ಥರು ಬಾಗಿನ ಅರ್ಪಿಸಿ ಸಂಭ್ರಮಿಸಿದ್ದಾರೆ. ಲಕ್ಷಾಂತರ ರೈತರ ಆಧಾರವಾಗಿರುವ ಮದಗದಕೆರೆ (Madagadakere Lake) ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪವಿದೆ. ಈ ಮಧ್ಯೆ ಕಡೂರು (Kadur) ತಾಲೂಕು ಬರ ಪೀಡಿತ ಎಂದು ಘೋಷಣೆಯಾಗಿದೆ. ಎರಡು ತಿಂಗಳ ಹಿಂದೆ ಮದಗದಕೆರೆ ಸಂಪೂರ್ಣ ಖಾಲಿಯಾಗಿತ್ತು. ಒಮ್ಮೆ ಕೆರೆ ಕೋಡಿ ಬಿದ್ರೆ ಒದು ವರ್ಷ ಕಾಲ ಲಕ್ಷಾಂತರ ರೈತರಿಗೆ ಆಸರೆಯಾಗುವ ಕೆರೆ ಇದಾಗಿದೆ. ಮಳೆಗಾಗಿ ಮದಗದಕೆರೆ ಸಮೀಪದ ಕೆಂಚಮ್ಮ ದೇವಿಗೆ ಇತ್ತೀಚೆಗೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಗ್ರಾಮಸ್ಥರ ಜೊತೆ ಸೇರಿ ಕಡೂರು ಶಾಸಕ ಕೆ.ಎಸ್. ಆನಂದ್ ಮಳೆಗಾಗಿ ಪೂಜೆ ಸಲ್ಲಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More