ಸಾಂಬ್ರಾ ವಿಮಾನ ನಿಲ್ದಾಣಕ್ಕೆ 4-ಲೇನ್ ರಸ್ತೆ ಆಗಬೇಕಿದೆ, ಜಾರಕಿಹೊಳಿ ಜೊತೆ ಚರ್ಚೆ ಆಗಿದೆ: ಜಗದೀಶ್ ಶೆಟ್ಟರ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 28, 2025 | 7:42 PM

ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿಯ ಬಗ್ಗೆ ಮಾತಾಡಿದ ಸಂಸದ ಜಗದೀಶ್ ಶೆಟ್ಟರ್, ಸಾಂಬ್ರಾ ವಿಮಾನ ನಿಲ್ದಾಣಕ್ಕೆ 4-ಲೇನ್ ರಸ್ತೆ ಮಾಡುವ ಅವಶ್ಯಕತೆಯಿದೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಲೋಕೋಪಯೋಗಿ ಖಾತೆಯನ್ನೂ ಹೊಂದಿರುವುದರಿಂದ ಭೂ ಸ್ವಾಧೀನ ಪ್ರಕ್ರಿಯೆ ಬೇಗ ಆರಂಭವಾಗಲಿದೆ ಮತ್ತು ವಂದೇ ಭಾರತ್ ರೈಲು ಸೇವೆಗೆ ಸಂಬಂಧಿಸಿದ ಮತುಕತೆ ಮುಗಿದಿದ್ದು, ಶೀಘ್ರದಲ್ಲಿ ಸೇವೆ ಶುರುವಾಗಲಿದೆ ಎಂದು ಹೇಳಿದರು.

ಬೆಳಗಾವಿ, ಫೆ. 28: ನಗರದಲ್ಲಿಂದು ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಸಂಸದ ಜಗದೀಶ್ ಶೆಟ್ಟರ್, ರಾಜ್ಯ ವಸತಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಆಡಿರುವ ಮಾತಿಗಳನ್ನು ಗೇಲಿ ಮಾಡಿದರು. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ, ಅದಷ್ಟು ಬೇಗ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಜಮೀರ್ ಅಹ್ಮದ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ಕಾಂಗ್ರೆಸ್ ಪಕ್ಷದಿಂದಲೇ ಕೆಲ ನಾಯಕರು ಹೊರಬೀಳುವ ಸಿದ್ಧತೆಯಲ್ಲಿರುವಾಗ ಜಮೀರ್ ಆಡುವ ಮಾತಿಗೆ ಏನಾದರೂ ಬೆಲೆ ಇದೆಯೇ ಎಂದು ನಗುತ್ತಾ ಹೇಳಿದರು. ಅವರು ಕೆಲ ನಾಯಕರು ಅಂತ ಯಾರನ್ನು ಉದ್ದೇಶಿಸಿ ಹೇಳಿದರೋ?

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ಕುಂದಾಪುರ ತಿರುಗೇಟು    

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.