ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು

Edited By:

Updated on: Mar 20, 2026 | 7:14 PM

ಬೆಳಗಾವಿಯ ಉಕ್ಕಡ ಗ್ರಾಮದಲ್ಲಿ 15 ದಿನದ ಹಸುಗೂಸಿನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹೆಣ್ಣುಮಗು ಎಂದು ತಿಳಿದು ತಂದೆ ಭೀಮರಾಯ ವಿಷವುಣಿಸಿ ಹತ್ಯೆ ಮಾಡಿದ್ದಾನೆ. ಮಾರ್ಚ್ 17 ರಂದು ನಡೆದ ಈ ಘಟನೆ ಕುಟುಂಬಸ್ಥರಿಂದ ಬಹಿರಂಗಗೊಂಡಿದ್ದು, ತಂದೆಯ ಕ್ರೂರತೆ ಸಮಾಜದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಗಾವಿ, ಮಾರ್ಚ್​ 20: ಹೆಣ್ಣುಮಗು ಎನ್ನುವ ಕಾರಣಕ್ಕೆ 15 ದಿನದ ಹಿಂದೆ ಜನಸಿದ್ದ ಹಸುಗೂಸಿಗೆ ವಿಷವುಣಿಸಿ ಕೊಲೆ ಮಾಡಿದ್ದ ತಂದೆಯನ್ನು ಇದೀಗ ಪೊಲೀಸರು. ಭೀಮರಾಯ ಬಂಧಿತ ಆರೋಪಿ. ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಘಟನೆ ಬಗ್ಗೆ ಭೀಮರಾಯನ ಸಂಬಂಧಿಕರು ಪ್ರತಿಕ್ರಿಯಿಸಿದ್ದು, ಆತನ ಕ್ರೂರತೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸದ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 20, 2026 07:14 PM
Follow Us