ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು

Edited By:

Updated on: Apr 14, 2026 | 10:41 PM

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವು ಕಮ್ಮಾರ ಎಂಬ ಯುವಕ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮನ ಜೀವ ಹೋಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಏಳು ವೈದ್ಯರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿರುವುದು ಸಾವಿಗೆ ಕಾರಣ ಎಂದು ಮೃತನ ಸಹೋದರ ರಮೇಶ್ ಲಿಂಗಪುರಿ ದೂರಿದ್ದಾರೆ.

ಬೆಳಗಾವಿ, ಏಪ್ರಿಲ್​ 14: ಬಿಮ್ಸ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ರೋಗಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯ ಬ್ರಹ್ಮ ನಗರದಲ್ಲಿ ನಿನ್ನೆ ನಡೆದಿದೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದಿದ್ದಕ್ಕೆ ಯುವಕ ಸಾವನ್ನಪ್ಪಿರುವುದಾಗಿ ಆರೋಪ ಕೇಳಿಬಂದಿದೆ. ರಾತ್ರಿ ಡ್ಯೂಟಿಗೆ 7 ವೈದ್ಯರು ಇದ್ರೂ ಗೈರಾಗಿದ್ದಕ್ಕೆ ಮೃತಪಟ್ಟಿದ್ದಾನೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಶಿವು ಬದುಕುತ್ತಿದ್ದ ಎಂದು ಅಣ್ಣ ರಮೇಶ್ ಲಿಂಗಪುರಿ ಹೇಳಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಕಾರಣರಾದ ವೈದ್ಯರನ್ನು ಅಮಾನತುಗೊಳಿಸಬೇಕೆಂದು ಕುಟುಂಬ ಒತ್ತಾಯಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Sahadev Mane