ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

Edited By:

Updated on: Feb 04, 2026 | 3:53 PM

ಬೆಳಗಾವಿ ಜಿಲ್ಲೆಯ ಗೋಡನಕಟ್ಟಿ ಗ್ರಾಮದಲ್ಲಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ಅವರನ್ನು ಸಿಗರೇಟ್ ಹಣ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಅಂಗಡಿಗೆ ಬಂದ ನಾಲ್ವರು ಯುವಕರು ಸಿಗರೇಟ್ ಮತ್ತು ನೀರು ತೆಗೆದುಕೊಂಡು ಹಣ ನೀಡಲು ನಿರಾಕರಿಸಿದಾಗ ಈ ಘಟನೆ ನಡೆದಿದೆ.

ಬೆಳಗಾವಿ, ಫೆಬ್ರವರಿ 04: ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ಹಣ ಕೇಳಿದ್ದಕ್ಕಾಗಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್​​​ನನ್ನು ನಾಲ್ವರು ಯುವಕರು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದೆ. ಯುವಕರು ಎರಡು ಸಿಗರೇಟ್ ಮತ್ತು ನೀರಿನ ಬಾಟಲಿಯನ್ನು ತೆಗೆದುಕೊಂಡು ಹಣ ಕೊಡದೇ ಹೋಗುತ್ತಿದ್ದರು. ಈ ವೇಳೆ ಯಲ್ಲಪ್ಪ ನಾಯಕ್ ಪ್ರಶ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯಲ್ಲಪ್ಪರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.