ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಬೆಳಗಾವಿ-ಗೋವಾ (Belagavi-Goa) ರಸ್ತೆ ಸಂಚಾರ ಮತ್ತೆ ಬಂದ್ ಆಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಇದಾಗಿದ್ದು, ಈ ಸೇತುವೆ ಕುಸಿಯುವ ಕೆಲವೇ ಸೆಕೆಂಡ್ ಹಿಂದೆ ಬಸ್ ಪಾಸ್ ಆಗಿದೆ. ಅದೃಷ್ಟವಶಾತ್ ಬಸ್ ದಾಟಿದ ಬಳಿಕ ಸೇತುವೆ ನದಿಗೆ ಕೊಚ್ಚಿ ಹೋಗಿದೆ.
ಬೆಳಗಾವಿ, (ಜೂನ್ 15): ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಬೆಳಗಾವಿ-ಗೋವಾ (Belagavi-Goa) ರಸ್ತೆ ಸಂಚಾರ ಮತ್ತೆ ಬಂದ್ ಆಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಇದಾಗಿದ್ದು, ಈ ಸೇತುವೆ ಕುಸಿಯುವ ಕೆಲವೇ ಸೆಕೆಂಡ್ ಹಿಂದೆ ಬಸ್ ಪಾಸ್ ಆಗಿದೆ. ಅದೃಷ್ಟವಶಾತ್ ಬಸ್ ದಾಟಿದ ಬಳಿಕ ಸೇತುವೆ ನದಿಗೆ ಕೊಚ್ಚಿ ಹೋಗಿದೆ. ಇನ್ನು ಈ ಸೇತುವೆ ಕೊಚ್ಚಿಕೊಂಡು ಹೋಗಿದ್ದರಿಂದ ಜಾಂಬೋಟಿ, ಕಣಕುಂಬಿ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇದರಿಂದ ಅಕ್ಕಪಕ್ಕದ ಗ್ರಾಮಸ್ಥರು, ಸವಾರರು ಪರದಾಡುತ್ತಿದ್ದಾರೆ.
Follow Us
Latest Videos
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK

