ಬ್ಯಾನರ್ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು

Updated on: Jan 05, 2026 | 4:58 PM

ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಬಳ್ಳಾರಿಯ ಅವಂಭಾವಿಯಲ್ಲಿರುವ ರೆಡ್ಡಿ ನಿವಾಸದಲ್ಲಿ ಬಾಂಬ್ ನಿಷ್ಕ್ರಿಯ ದಳ ಇಂಚಿಂಚೂ ಪರಿಶೀಲನೆ ನಡೆಸಿದೆ. ಬುಲೆಟ್ ಪತ್ತೆ ಹಚ್ಚಲು ಬಾಂಬ್ ನಿಷ್ಕ್ರಿಯ ದಳ ಎಂಟ್ರಿ ಕೊಟ್ಟಿದ್ದು, ಬುಲೆಟ್‌ಗಳಿಗಾಗಿ ಹುಡುಕಾಟ ನಡೆಸಿತ್ತು. DSMD ಮಿಷನ್​ಗಳ ಮೂಲಕ ಘಟನಾ ಸ್ಥಳದ ಮೂಲೆ ಮೂಲೆಯನ್ನ ಸರ್ಚ್ ಮಾಡಿದ್ರು. ಬಾಂಬ್ ನಿಷ್ಕ್ರೀಯ ತಂಡಕ್ಕೆ FSL ಟೀಮ್ ಕೂಡಾ ಸಾಥ್ ನೀಡಿದೆ. ಇನ್ನು ಗಲಾಟೆ ವೇಳೆ ಹಾರಿದ್ದ ಗುಂಡು ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿರುವ ಕಚೇರಿಯ ಗ್ಲಾಸ್​​​ಗೆ ತಗುಲಿದ್ದು, ಗಾಜು ಪುಡಿ ಪುಡಿಯಾಗಿದೆ. ಇದರಿಂದ ಬಾಂಬ್ ನಿಷ್ಕ್ರಿಯ ದಳ, ಜನಾರ್ದನ ರೆಡ್ಡಿ  ಕಚೇರಿಯೊಳಗೆ ಪರಿಶೀಲನೆ ನಡೆಸಿದೆ.

ಬಳ್ಳಾರಿ, (ಜನವರಿ 05): ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣದ (bellary violence) ತನಿಖೆ ಚುರುಕುಗೊಂಡಿದೆ. ಬಳ್ಳಾರಿಯ ಅವಂಭಾವಿಯಲ್ಲಿರುವ ರೆಡ್ಡಿ ನಿವಾಸದಲ್ಲಿ ಬಾಂಬ್ ನಿಷ್ಕ್ರಿಯ ದಳ ಇಂಚಿಂಚೂ ಪರಿಶೀಲನೆ ನಡೆಸಿದೆ. ಬುಲೆಟ್ ಪತ್ತೆ ಹಚ್ಚಲು ಬಾಂಬ್ ನಿಷ್ಕ್ರಿಯ ದಳ ಎಂಟ್ರಿ ಕೊಟ್ಟಿದ್ದು, ಬುಲೆಟ್‌ಗಳಿಗಾಗಿ ಹುಡುಕಾಟ ನಡೆಸಿತ್ತು. DSMD ಮಿಷನ್​ಗಳ ಮೂಲಕ ಘಟನಾ ಸ್ಥಳದ ಮೂಲೆ ಮೂಲೆಯನ್ನ ಸರ್ಚ್ ಮಾಡಿದ್ರು. ಬಾಂಬ್ ನಿಷ್ಕ್ರೀಯ ತಂಡಕ್ಕೆ FSL ಟೀಮ್ ಕೂಡಾ ಸಾಥ್ ನೀಡಿದೆ. ಇನ್ನು ಗಲಾಟೆ ವೇಳೆ ಹಾರಿದ್ದ ಗುಂಡು ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿರುವ ಕಚೇರಿಯ ಗ್ಲಾಸ್​​​ಗೆ ತಗುಲಿದ್ದು, ಗಾಜು ಪುಡಿ ಪುಡಿಯಾಗಿದೆ. ಇದರಿಂದ ಬಾಂಬ್ ನಿಷ್ಕ್ರಿಯ ದಳ, ಜನಾರ್ದನ ರೆಡ್ಡಿ  ಕಚೇರಿಯೊಳಗೆ ಪರಿಶೀಲನೆ ನಡೆಸಿದೆ.

ಇದನ್ನೂ ನೋಡಿ: ಬಳ್ಳಾರಿ ಗಲಭೆ: ಪೊಲೀಸ್ ವಶದಲ್ಲಿದ್ದ 9 ಗನ್​​ಮ್ಯಾನ್​​ ಪೈಕಿ ಓರ್ವ ಅರೆಸ್ಟ್

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More