ಕಿರುಕುಳ ತಾಳಲಾರದೇ ಮೇಲಧಿಕಾರಿಯ ಮುಖಕ್ಕೆ ರಾಜೀನಾಮೆ ಪತ್ರ ಬಿಸಾಕಿದ ಮಹಿಳಾ ಸಿಬ್ಬಂದಿ
ಮೇಲಧಿಕಾರಿಯ ಕಿರುಕುಳದಿಂದ ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಔಷಧ ಉಗ್ರಾಣ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿದ್ದಾರೆ. ಲೈಂಗಿಕ ಕಿರುಕುಳದ ಬಗ್ಗೆ ಯಾರಿಗಾದರೂ ಹೇಳಿದರೆ ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದ. ಕೊನೆಗೆ ಹಿಂಸೆ ತಾಳಲಾರದೇ ಸಿಬ್ಬಂದಿಯೇ ಚಂದ್ರಶೇಖರ್ ಮುಖಕ್ಕೆ ರಾಜೀನಾಮೆ ಪತ್ರವನ್ನು ಎಸೆದಿದ್ದಾರೆ.
ಮಂಗಳೂರು, (ಜೂನ್ 14): ಮೇಲಧಿಕಾರಿಯ ಕಿರುಕುಳದಿಂದ ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಔಷಧ ಉಗ್ರಾಣ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿದ್ದಾರೆ. ಲೈಂಗಿಕ ಕಿರುಕುಳದ ಬಗ್ಗೆ ಯಾರಿಗಾದರೂ ಹೇಳಿದರೆ ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದ. ಕೊನೆಗೆ ಹಿಂಸೆ ತಾಳಲಾರದೇ ಸಿಬ್ಬಂದಿಯೇ ಚಂದ್ರಶೇಖರ್ ಮುಖಕ್ಕೆ ರಾಜೀನಾಮೆ ಪತ್ರವನ್ನು ಎಸೆದಿದ್ದಾರೆ. ಇನ್ನು ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಆದ್ರೆ, ಇತ್ತ ಅಧಿಕಾರಿ ಚಂದ್ರಶೇಖರ್ ತಲೆಮರೆಸಿಕೊಂಡಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿಂದ ನಮ್ಮ ಪ್ರತಿನಿಧಿ ಪೃಥ್ವಿರಾಜ್ ನೀಡಿರೋ ವರದಿ ಇಲ್ಲಿದೆ.
Follow Us
