AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ಎಚ್ಚರ ತಪ್ಪಿದ್ರೆ ಹೊಳೆ ಪಾಲು, ವಿಡಿಯೋ ವೈರಲ್

ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ಎಚ್ಚರ ತಪ್ಪಿದ್ರೆ ಹೊಳೆ ಪಾಲು, ವಿಡಿಯೋ ವೈರಲ್

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 07, 2024 | 3:40 PM

Share

ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದೆ. ಇದರಿಂದ ಜನಜೀವ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ಹಳ್ಳ-ಕೊಳ್ಳ ನದಿಗಳು ಮೈದುಂಬಿ ಹರಿಯುತ್ತಿವೆ. ಇನ್ನು ಕೆಲವೆಡೆ ಸೇತುಗಳು ಮುಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಇದರ ಮಧ್ಯ ಗ್ರಾಮಸ್ಥರು ಕಿರು ದಾರಿಯಲ್ಲಿ ಕಷ್ಟ ಪಟ್ಟು ಹೆಣ ಸಾಗಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಹಾಗಾದ್ರೆ, ಇದು ನಡೆದಿದ್ದು ಎಲ್ಲಿ ಎನ್ನುವ ಮಾಹಿತಿ ಇಲ್ಲಿದೆ.

ಮಂಗಳೂರು, (ಜುಲೈ, 07): ಕರ್ನಾಟಕದಲ್ಲಿ ಮುಂಗಾರು ಮಳೆ ಜೋರಾಗಿದೆ. ಅದರಲ್ಲೂ ಮಲೆನಾಡು, ಕರಾವಳಿ ಭಾಗದಲ್ಲಿ ಅಂತೂ ವರುಣ ಅಬ್ಬರಿಸುತ್ತಿದ್ದಾನೆ. ಕರಾವಳಿಯಲ್ಲಿ ಜನರನ್ನು ಮನೆಯಿಂದ ಆಚೆ ಬರದಂತೆ ಎಡಬಿಡದೇ ಮಳೆಯಾಗುತ್ತಿದೆ. ಇದರಿಂದ ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಇದರ ಮಧ್ಯ ದಕ್ಷಿಣ ಕನ್ನಡ ಜಿಲ್ಲೆಯ ಬೆಂಚಿನಡ್ಕ ಗ್ರಾಮ ಜನರು ಕಿರು ದಾರಿಯಲ್ಲಿ ಕಷ್ಟ ಪಟ್ಟು ಹೆಣ ಸಾಗಿಸಿದ್ದು, ಇದೀಗ ಆ ವಿಡಿಯೋ ವೈರಲ್ ಆಗಿದೆ. ಇಲ್ಲಿನ ವೃದ್ಧೆಯೋರ್ವರ ಶವವನ್ನು ಕಿಂಡಿ ಅಣೆಕಟ್ಟಿನ ಕಾಲುದಾರಿಯಲ್ಲಿ ಪ್ರಯಾಸಪಟ್ಟು ಹೊತ್ತುಕೊಂಡು ಹೋಗಿದ್ದಾರೆ. ಬೆಂಚಿನಡ್ಕ–ಕಾಜಲ ಪ್ರದೇಶಗಳ ನಡುವೆ ಹರಿಯುವ ಹೊಳೆ. ಸ್ವಲ್ಪ ಎಚ್ಚರ ತಪ್ಪಿದರೂ ಹೊಳೆಗೆ ಬೀಳಿತ್ತಾರೆ ಅಷ್ಟು ಕಿರಿದಾದ ದಾರಿಯಲ್ಲಿ ಹೆಣ ಹೊತ್ತುಕೊಂಡು ಸಾಗಿದ್ದಾರೆ. ಸೇತುವೆ ನಿರ್ಮಾಣಕ್ಕಾಗಿ, ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ಈ ರೀತಿಯಲ್ಲಿ ಕಷ್ಟ ಪಟ್ಟು ಸಂಚರಿಸಬೇಕಾದ ಪರಿಸ್ಥಿತಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More