AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಗೆ ನೀಡುತ್ತಿದ್ದ ಹಣದ ಬದಲು ಫೆಬ್ರುವರಿ ತಿಂಗಳಿಂದ ಅಕ್ಕಿಯೇ ಸಿಗಲಿದೆ: ಕೆಹೆಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಗೆ ನೀಡುತ್ತಿದ್ದ ಹಣದ ಬದಲು ಫೆಬ್ರುವರಿ ತಿಂಗಳಿಂದ ಅಕ್ಕಿಯೇ ಸಿಗಲಿದೆ: ಕೆಹೆಚ್ ಮುನಿಯಪ್ಪ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 19, 2025 | 3:26 PM

Share

ಸಚಿವರು ಹೇಳುವ ಪ್ರಕಾರ ಅನ್ನಭಾಗ್ಯ ಯೋಜನೆ ಅಡಿ 4.5 ಕೋಟಿ ಜನ ಫಲಾನುಭವಿಗಳಿದ್ದಾರೆ, ಕೇಂದ್ರ ಆಹಾರ ನಿಗಮದಿಂದ ಪ್ರತಿತಿಂಗಳು 2ಲಕ್ಷ ಟನ್ ಗಳಷ್ಟು ಅಕ್ಕಿ ಬೇಕಾಗುತ್ತದೆ ಮತ್ತು ನಿಗಮವು ಪ್ರತಿ ಕೇಜಿಗೆ 22.50ಯಂತೆ ಅಕ್ಕಿ ಕೊಡಲಿದೆ, ಫಲಾನುಭವಿಗಳು ಜನೆವರಿವರೆಗೆ 5 ಕೆಜಿ ಅಕ್ಕಿಗೆ ಹಣ ಪಡೆಯಲಿದ್ದಾರೆ ಮತ್ತು ಫೆಬ್ರುವರಿಯಿಂದ ಅವರಿಗೆ ಅಕ್ಕಿ ಸಿಗಲಿದೆ ಎಂದು ಸಚಿವ ಮುನಿಯಪ್ಪ ಹೇಳಿದರು.

ಬೆಂಗಳೂರು: ಅಕ್ಕಿ ಬದಲು ರೊಕ್ಕ, ರೊಕ್ಕದ ಬದಲು ಅಕ್ಕಿ-ಹೌದು, ಕರ್ನಾಟಕ ಸರ್ಕಾರ ಅನ್ನಭಾಗ್ಯ ಸ್ಕೀಮ್ ನಡಿ 5 ಕೆಜಿ ಅಕ್ಕಿ ಬದಲು ಹಣ ನೀಡುವುದನ್ನು ಫೆಬ್ರುವರಿ ತಿಂಗಳಿಂದ ನಿಲ್ಲಿಸಲಿದೆ. ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಹೆಚ್ ಮುನಿಯಪ್ಪ, ಅಕ್ಕಿಯ ದಾಸ್ತಾನು ಸಾಕಷ್ಟಿದ್ದರೂ ಕೇಂದ್ರ ಸರ್ಕಾರ ಅದನ್ನು ನೀಡಲು ನಿರಾಕಸಿದ್ದರಿಂದ 5 ಕೆಜಿ ಅಕ್ಕಿಯ ಬದಲು ಹಣ ನೀಡಲಾಗುತಿತ್ತು, ಆದರೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಅಕ್ಕಿ ನೀಡುವ ಭರವಸೆಯನ್ನು ಕೊಟ್ಟಿರುವುದರಿಂದ ಫೆಬ್ರುವರಿ ತಿಂಗಳಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿದಂತೆ 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅನ್ನಭಾಗ್ಯ ಯೋಜನೆ: ಕಲಬುರಗಿ ಮಹಿಳೆ ಹೇಳುವುದನ್ನು ಕೇಳಿದರೆ ಸಚಿವ ಮುನಿಯಪ್ಪ ಹೇಳಿದ್ದು ಸುಳ್ಳು ಅನಿಸುತ್ತದೆ!

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.