AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಕನ್ಯಾ ಸ್ಮರಣೆಯ ಫಲವೇನು? ಯಾರು ಈ ಪಂಚ ಕನ್ಯೆಯರು

ಪಂಚಕನ್ಯಾ ಸ್ಮರಣೆಯ ಫಲವೇನು? ಯಾರು ಈ ಪಂಚ ಕನ್ಯೆಯರು

ಆಯೇಷಾ ಬಾನು
ಆಯೇಷಾ ಬಾನು|

Updated on: Jul 25, 2024 | 7:08 AM

Share

ಅಹಲ್ಯೆ, ದ್ರೌಪದಿ, ಸೀತೆ, ತಾರಾ ಮತ್ತು ಮಂಡೋದರಿ ಎಂಬ ಪಂಚ ಕನ್ಯೆಯರನ್ನು ಪ್ರತಿ ದಿನ ನೆನಪಿಸಿಕೊಳ್ಳುವುದರಿಂದ ಜೀವನದಲ್ಲಿ ಬಹಳಷ್ಟು ಬದಲಾವಣೆಗಳು ಆಗುತ್ತವೆ. ಸುಖ-ಶಾಂತಿ ನೆಲೆಸುತ್ತದೆ. ಜೀವನ ಸುಧಾರಣೆ ಕಾಣಬಹುದು. ಮತ್ತಷ್ಟು ಮಾಹಿತಿಯನ್ನು ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.

ಅಹಲ್ಯಾ ದ್ರೌಪದೀ ಸೀತಾ ತಾರಾ ಮಂಡೋದರೀ ತಥಾ
ಪಂಚ ಕನ್ಯಾಃ ಸ್ಮರೇನ್ನಿತ್ಯಂ ಸರ್ವ ಪಾತಕನಾಶನಂ ||

ಬೆಳಗ್ಗೆ ಎದ್ದು ನಿತ್ಯ ಕರ್ಮಗಳನ್ನು ಮುಗಿಸಿ ಪೂರ್ವಾಭಿಮುಖ ಅಥವ ಉತ್ತರಾಭಿಮುಖವಾಗಿ ಪ್ರತಿ ದಿನ ಈ ಮಂತ್ರವನ್ನು ಜಪ ಮಾಡುವುದರಿಂದ ಅನೇಕ ಲಾಭಗಳಿವೆ. ಈ ಪಂಚಕನ್ಯಾ ಸ್ಮರಣೆ ಮಾಡುವುದರಿಂದ ಕಂಕಣ ಭಾಗ್ಯ, ಮಕ್ಕಳ ಭಾಗ್ಯ, ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ.

ಅಹಲ್ಯೆ, ದ್ರೌಪದಿ, ಸೀತೆ, ತಾರಾ ಮತ್ತು ಮಂಡೋದರಿ ಎಂಬ ಪುರಾಣ ಪ್ರಸಿದ್ಧ ಮಹಿಳಾ ಆದರ್ಶಕರನ್ನು ಪ್ರತಿನಿತ್ಯವೂ ಸ್ಮರಿಸುವುದರಿಂದ ದೊಡ್ಡ ದೊಡ್ಡ ಪಾಪಗಳೂ ನಾಶವಾಗುತ್ತವೆ. ಪುಣ್ಯ ಸಂಪಾದನೆಯಾಗುತ್ತದೆ. ಇನ್ನು ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ಮತ್ತಷ್ಟು ತಿಳಿಸಿಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.