ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಜಾಜೂರು ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್ ಕಡ್ಡಿ ಮತ್ತು 100 ಡಿಟೋನೇಟರ್ಗಳನ್ನು ದಾಬಸ್ ಪೇಟೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಲ್ಲುಗಣಿಗಾರಿಕೆಗೆ ಬಳಸುವ ಈ ಸ್ಪೋಟಕಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಶಿವಶಂಕರ್ ಎಂಬಾತನನ್ನು ಬಂಧಿಸಲಾಗಿದ್ದು, ಬಿಎನ್ಎಸ್ಎಸ್ ಸೆಕ್ಷನ್ 288ರ ಅಡಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು, ಸೆಪ್ಟೆಂಬರ್ 5: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಜಾಜೂರು ಬಳಿ ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದುದನ್ನು ಪತ್ತೆಮಾಡಿದ ಪೊಲೀಸರು ಬೃಹತ್ ಪ್ರಮಾಣದ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್ಗಳನ್ನು ಜಪ್ತಿ ಮಾಡಿದ್ದಾರೆ. ಒಟ್ಟು 600 ಜಿಲೆಟಿನ್ ಕಡ್ಡಿಗಳು ಮತ್ತು 100 ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಬಸ್ ಪೇಟೆ ಪೊಲೀಸರು ಈ ಪ್ರಕರಣದಲ್ಲಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ, ಸ್ಪೋಟಕ ವಸ್ತುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಶಿವಶಂಕರ್ ಎಂಬಾತನನ್ನು ಬಂಧಿಸಿದ್ದಾರೆ. ಕಲ್ಲುಗಣಿಗಾರಿಕೆ ಚಟುವಟಿಕೆಗಳಿಗೆ ಸಾಮಾನ್ಯವಾಗಿ ಬಳಸುವ ಈ ಅಪಾಯಕಾರಿ ಜಿಲೆಟಿನ್ ಕಡ್ಡಿಗಳು ಮತ್ತು ಡಿಟೋನೇಟರ್ಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ದಾಬಸ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುವ ಅಕ್ರಮ ಕಲ್ಲುಗಣಿಗಾರಿಕೆಗಾಗಿ ಈ ಸ್ಫೋಟಕಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಬಂಧಿತ ಶಿವಶಂಕರ್ ವಿರುದ್ಧ ಸ್ಪೋಟಕ ವಸ್ತುಗಳ ಕಾಯ್ದೆ ಮತ್ತು ಬಿಎನ್ಎಸ್ಎಸ್ ಸೆಕ್ಷನ್ 288ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸ್ಪೋಟಕ ಸಾಗಾಟದ ಮೂಲ, ಸಾಗಾಟದ ಉದ್ದೇಶ ಮತ್ತು ಅದಕ್ಕೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಚಟುವಟಿಕೆಗಳ ಬಗ್ಗೆ ದಾಬಸ್ ಪೇಟೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
